<p><strong>ಮಂಗಳೂರು: </strong>ನಗರದ ವ್ಯಕ್ತಿಯೊಬ್ಬರ ಕ್ರೆಡಿಟ್ ಕಾರ್ಡ್ ಮಾಹಿತಿ ಕದ್ದು, ಅವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಆರೋಪದಲ್ಲಿ ಇಬ್ಬರು ಟಿಬೇಟಿಯನ್ ಪ್ರಜೆಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಉತ್ತರಕನ್ನಡ ಜಿಲ್ಲೆಯ ಮುಂಟಗೋಡಿನ ಟಿಬೇಟಿಯನ್ ಕಾಲೊನಿಯ ಲೋಬಸಂಗ್ ಸಂಗ್ಯೆ (24) ಹಾಗೂ ದಕಪ ಪುಂದೇ (40) ಬಂಧಿತರು.</p>.<p>ಮಂಗಳೂರು ವೈದ್ಯನಾಥ ನಗರದ ನಿವಾಸಿ ಸಿ.ಡಿ. ಅಲೆಕ್ಸಾಂಡರ್ ಎಂಬುವರು ಎಸ್ ಬಿ ಐ ಬ್ಯಾಂಕ್ ನ ಕ್ರೆಡಿಟ್ ಕಾರ್ಡ್ ಅನ್ನು ಮೂರು ವರ್ಷದಿಂದ ಬಳಸುತ್ತಿದ್ದರು. ಮಾರ್ಚ್ 23ರಂದು ಬ್ಯಾಂಕ್ಗೆ ಆ ಕಾರ್ಡ್ ಅನ್ನು ಸರೆಂಡರ್ ಮಾಡಿದ್ದರು. ಆದರೆ ಮಾರ್ಚ್ 27 ರಂದು ಅವರ ಖಾತೆಯಿಂದ ಯಾರೋ ಅಪರಿಚಿತರು ₹1.12 ಲಕ್ಷ ಬೇರೆ ಬೇರೆ ಖಾತೆಗೆ ವರ್ಗಾಯಿಸಿರುವುದು ಬ್ಯಾಂಕ್ ಸ್ಟೇಟ್ಮೆಂಟ್ನಲ್ಲಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.</p>.<p>ತನಿಖೆ ಆರಂಭಿಸಿದ ಪೊಲೀಸರಿಗೆ ಮೊಬೈಲ್ನವಿಕಿ ವಾಲೆಟ್ ಆ್ಯಪ್ ಮೂಲಕ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಫಿನ್ ಕೇರ್ ಸ್ಮಾಲ್ ಫೈನ್ಯಾನ್ಸ್ ಬ್ಯಾಂಕ್ನಲ್ಲಿರುವ ಎರಡು ಖಾತೆಗಳಿಗೆ ಮತ್ತು ಆ ಬಳಿಕ ಉತ್ತರ ಕನ್ನಡದ ಟಿಬೇಟಿಯನ್ ಕಾಲೊನಿಯ ಲಾಮಾ ಕ್ಯಾಂಪ್ನಲ್ಲಿ ವಾಸವಿರುವ ಲೋಬಸಂಗ್ ಸಂಗ್ಯೆಯ ಅವರ ಕೆನರಾ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿರುವುದು ಕಂಡುಬಂದಿತ್ತು.</p>.<p>ತನಿಖೆ ಮುಂದುವರಿಸಿದ ಪೊಲೀಸರಿಗೆ ಆರೋಪಿ ದಕಫಾ ಪುಂಡೆ, ಚೀನಾದ ನಿಷೇಧಿತ ಆ್ಯಪ್ಗಳಾದ wechat ಮತ್ತು red pack ಮುಂತಾದವುಗಳ ಮೂಲಕ ಹವಾಲ ರೀತಿಯಲ್ಲಿ ಹಣವನ್ನು ವರ್ಗಾವಣೆ ಮಾಡಿರುವುದು ಕಂಡುಬಂದಿತ್ತು.</p>.<p>ಆರೋಪಿಗಳಿಬ್ಬರನ್ನು ಬಂಧಿಸಿರುವ ಪೊಲೀಸರು ಮಂಗಳೂರಿನ 7ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ನಗರದ ವ್ಯಕ್ತಿಯೊಬ್ಬರ ಕ್ರೆಡಿಟ್ ಕಾರ್ಡ್ ಮಾಹಿತಿ ಕದ್ದು, ಅವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಆರೋಪದಲ್ಲಿ ಇಬ್ಬರು ಟಿಬೇಟಿಯನ್ ಪ್ರಜೆಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಉತ್ತರಕನ್ನಡ ಜಿಲ್ಲೆಯ ಮುಂಟಗೋಡಿನ ಟಿಬೇಟಿಯನ್ ಕಾಲೊನಿಯ ಲೋಬಸಂಗ್ ಸಂಗ್ಯೆ (24) ಹಾಗೂ ದಕಪ ಪುಂದೇ (40) ಬಂಧಿತರು.</p>.<p>ಮಂಗಳೂರು ವೈದ್ಯನಾಥ ನಗರದ ನಿವಾಸಿ ಸಿ.ಡಿ. ಅಲೆಕ್ಸಾಂಡರ್ ಎಂಬುವರು ಎಸ್ ಬಿ ಐ ಬ್ಯಾಂಕ್ ನ ಕ್ರೆಡಿಟ್ ಕಾರ್ಡ್ ಅನ್ನು ಮೂರು ವರ್ಷದಿಂದ ಬಳಸುತ್ತಿದ್ದರು. ಮಾರ್ಚ್ 23ರಂದು ಬ್ಯಾಂಕ್ಗೆ ಆ ಕಾರ್ಡ್ ಅನ್ನು ಸರೆಂಡರ್ ಮಾಡಿದ್ದರು. ಆದರೆ ಮಾರ್ಚ್ 27 ರಂದು ಅವರ ಖಾತೆಯಿಂದ ಯಾರೋ ಅಪರಿಚಿತರು ₹1.12 ಲಕ್ಷ ಬೇರೆ ಬೇರೆ ಖಾತೆಗೆ ವರ್ಗಾಯಿಸಿರುವುದು ಬ್ಯಾಂಕ್ ಸ್ಟೇಟ್ಮೆಂಟ್ನಲ್ಲಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.</p>.<p>ತನಿಖೆ ಆರಂಭಿಸಿದ ಪೊಲೀಸರಿಗೆ ಮೊಬೈಲ್ನವಿಕಿ ವಾಲೆಟ್ ಆ್ಯಪ್ ಮೂಲಕ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಫಿನ್ ಕೇರ್ ಸ್ಮಾಲ್ ಫೈನ್ಯಾನ್ಸ್ ಬ್ಯಾಂಕ್ನಲ್ಲಿರುವ ಎರಡು ಖಾತೆಗಳಿಗೆ ಮತ್ತು ಆ ಬಳಿಕ ಉತ್ತರ ಕನ್ನಡದ ಟಿಬೇಟಿಯನ್ ಕಾಲೊನಿಯ ಲಾಮಾ ಕ್ಯಾಂಪ್ನಲ್ಲಿ ವಾಸವಿರುವ ಲೋಬಸಂಗ್ ಸಂಗ್ಯೆಯ ಅವರ ಕೆನರಾ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿರುವುದು ಕಂಡುಬಂದಿತ್ತು.</p>.<p>ತನಿಖೆ ಮುಂದುವರಿಸಿದ ಪೊಲೀಸರಿಗೆ ಆರೋಪಿ ದಕಫಾ ಪುಂಡೆ, ಚೀನಾದ ನಿಷೇಧಿತ ಆ್ಯಪ್ಗಳಾದ wechat ಮತ್ತು red pack ಮುಂತಾದವುಗಳ ಮೂಲಕ ಹವಾಲ ರೀತಿಯಲ್ಲಿ ಹಣವನ್ನು ವರ್ಗಾವಣೆ ಮಾಡಿರುವುದು ಕಂಡುಬಂದಿತ್ತು.</p>.<p>ಆರೋಪಿಗಳಿಬ್ಬರನ್ನು ಬಂಧಿಸಿರುವ ಪೊಲೀಸರು ಮಂಗಳೂರಿನ 7ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>