ಮಂಗಳೂರು ವೈದ್ಯನಾಥ ನಗರದ ನಿವಾಸಿ ಸಿ.ಡಿ. ಅಲೆಕ್ಸಾಂಡರ್ ಎಂಬುವರು ಎಸ್ ಬಿ ಐ ಬ್ಯಾಂಕ್ ನ ಕ್ರೆಡಿಟ್ ಕಾರ್ಡ್ ಅನ್ನು ಮೂರು ವರ್ಷದಿಂದ ಬಳಸುತ್ತಿದ್ದರು. ಮಾರ್ಚ್ 23ರಂದು ಬ್ಯಾಂಕ್ಗೆ ಆ ಕಾರ್ಡ್ ಅನ್ನು ಸರೆಂಡರ್ ಮಾಡಿದ್ದರು. ಆದರೆ ಮಾರ್ಚ್ 27 ರಂದು ಅವರ ಖಾತೆಯಿಂದ ಯಾರೋ ಅಪರಿಚಿತರು ₹1.12 ಲಕ್ಷ ಬೇರೆ ಬೇರೆ ಖಾತೆಗೆ ವರ್ಗಾಯಿಸಿರುವುದು ಬ್ಯಾಂಕ್ ಸ್ಟೇಟ್ಮೆಂಟ್ನಲ್ಲಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.