ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಚಕ್ರ ವಾಹನಗಳೆರಡರ ಮುಖಾಮುಖಿ: ಬೈಕ್ ಸವಾರ ಸಾವು

Last Updated 26 ಡಿಸೆಂಬರ್ 2020, 9:11 IST
ಅಕ್ಷರ ಗಾತ್ರ

ಉಳ್ಳಾಲ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಶನಿವಾರ ನಸುಕಿನ ಜಾವ ಸಂಭವಿಸಿದೆ.

ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಮೃತಪಟ್ಟವರು. ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುವ ಸಂದರ್ಭ ನಸುಕಿನ 3 ರ ಜಾವಕ್ಕೆ ಅಪಘಾತ ಸಂಭವಿಸಿದೆ. ತಲೆಗೆ ಗಂಭೀರ ಗಾಯಗೊಂಡ ಸಂದೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೇಂಟರ್ ಆಗಿದ್ದ ಸಂದೇಶ್, ಕೊರೊನಾ ಲಾಕ್ ಡೌನ್ ನಂತರ ಕೊಲ್ಯ ಸಮೀಪ ಮೀನು ವ್ಯಾಪಾರ ನಡೆಸುತ್ತಿದ್ದರು. ಮಂಗಳೂರಿನ ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT