ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಇಬ್ಬರು ಸಾವು, ಐವರು ಮೃತಪಟ್ಟಿರುವ ಶಂಕೆ

Last Updated 28 ಫೆಬ್ರುವರಿ 2020, 11:46 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಕರಂಗಲ್ಪಾಡಿ ಬಳಿ ಶುಕ್ರವಾರ ಮಧ್ಯಾಹ್ನ ನಿರ್ಮಾಣ ಹಂತದ ಕಾಂಪೌಂಡ್ ಕುಸಿದಿದ್ದು, ಹಲವು ಕಾರ್ಮಿಕರು ಮಣ್ಣಿ‌ನಡಿ ಸಿಲುಕಿದ್ದಾರೆ. ಐವರು ಕಾರ್ಮಿಕರು ಮೃತಪಟ್ಟಿರುವ ಶಂಕೆ ಇದ್ದು, ಇಬ್ಬರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.

ಕರಂಗಲ್ಪಾಡಿಯಲ್ಲಿ ಹಳೆಯ ಮನೆಯೊಂದನ್ನು ತೆರವುಗೊಳಿಸಿ, ಹೊಸ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತಿತ್ತು. ಕಾಂಪೌಂಡ್ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಮೇಲಿನಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾಂಕ್ರೀಟ್ ತಡೆಗೋಡೆ ನಿರ್ಮಾಣಕ್ಕೆ ಸಿದ್ಧಪಡಿಸಿದ್ದ ಉಕ್ಕಿನ ಸರಳುಗಳ ಹೊದಿಕೆಯ ನಡುವೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಮಣ್ಣು ಕುಸಿದುಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT