<p><strong>ಮಂಗಳೂರು:</strong> ‘ದಕ್ಷಿಣ ಕನ್ನಡ ಹಾಳು ಮಾಡಿದ್ದು ಸಾಕು, ಕನಕಪುರ, ಬೆಂಗಳೂರಿನ ನೆಮ್ಮದಿಯನ್ನೂ ಕೆಡಿಸಬೇಡಿ’ ಎಂದು ಶಾಸಕ ಯು.ಟಿ.ಖಾದರ್ ಆರ್ಎಸ್ಎಸ್ ಪ್ರಮುಖ ಡಾ.ಪ್ರಭಾಕರ ಭಟ್ಟ ಕಲ್ಲಡ್ಕ ಅವರಿಗೆ ಟಾಂಗ್ ನೀಡಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕನಕಪುರ ಚಲೋ ಜಾಥಾ’ ಕುರಿತು ಪ್ರತಿಕ್ರಿಯೆ ನೀಡಿದರು.</p>.<p>‘ಕ್ರೈಸ್ತ ಸಂಸ್ಥೆಗಳು ದೇಶದಲ್ಲೇ ಆರೋಗ್ಯ ಮತ್ತು ಶಿಕ್ಷಣದ ಸೇವೆ ನೀಡಿವೆ. ಯಾರೂ ಸ್ಪರ್ಶಿಸದ ಕುಷ್ಠರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಯೇಸು ಕ್ರಿಸ್ತರ ಶಾಂತಿ ಸಂದೇಶದ ಪ್ರಕಾರ ಸೇವೆ ನೀಡಿದ್ದಾರೆ. ಅಂತಹ ಯೇಸು ಅವರ ಪ್ರತಿಮೆ ಕಾನೂನು ಬದ್ಧವಾಗಿ ಪ್ರತಿಷ್ಠಾಪಿಸುವುದರಲ್ಲಿ ತಪ್ಪೇನಿದೆ?’ ಎಂದು ಪ್ರಶ್ನಿಸಿದರು.</p>.<p>‘ಆದರೆ, ಜನರು ಶಾಂತಿ ನೆಮ್ಮದಿಯಿಂದ ಇರುವುದನ್ನು ಸಹಿಸಲಾಗದ ಪ್ರಭಾಕರ ಭಟ್ಟರು, ಅಲ್ಲಿಯೂ ಕೆಡಿಸಲು ಹೋಗಿದ್ದಾರೆ’ ಎಂದು ಟೀಕಿಸಿದರು.</p>.<p>‘ವಸತಿ, ಅಭಿವೃದ್ಧಿ, ನೆರೆ ಪರಿಹಾರ ಸೇರಿದಂತೆ ಹಲವಾರು ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಇವುಗಳನ್ನು ವಿಪಕ್ಷಗಳು ಪ್ರಶ್ನಿಸುತ್ತಾರೆ ಎಂದು ಸರ್ಕಾರ ಅಧಿವೇಶನವೇ ಕರೆಯುತ್ತಿಲ್ಲ. ಕೂಡಲೇ ಅಧಿವೇಶನ ನಡೆಸಬೇಕು. ನಿಮ್ಮ ಗೊಂದಲಗಳಿಗೆ ಜನರನ್ನು ಬಲಿ ಹಾಕಬೇಡಿ’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ದಕ್ಷಿಣ ಕನ್ನಡ ಹಾಳು ಮಾಡಿದ್ದು ಸಾಕು, ಕನಕಪುರ, ಬೆಂಗಳೂರಿನ ನೆಮ್ಮದಿಯನ್ನೂ ಕೆಡಿಸಬೇಡಿ’ ಎಂದು ಶಾಸಕ ಯು.ಟಿ.ಖಾದರ್ ಆರ್ಎಸ್ಎಸ್ ಪ್ರಮುಖ ಡಾ.ಪ್ರಭಾಕರ ಭಟ್ಟ ಕಲ್ಲಡ್ಕ ಅವರಿಗೆ ಟಾಂಗ್ ನೀಡಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕನಕಪುರ ಚಲೋ ಜಾಥಾ’ ಕುರಿತು ಪ್ರತಿಕ್ರಿಯೆ ನೀಡಿದರು.</p>.<p>‘ಕ್ರೈಸ್ತ ಸಂಸ್ಥೆಗಳು ದೇಶದಲ್ಲೇ ಆರೋಗ್ಯ ಮತ್ತು ಶಿಕ್ಷಣದ ಸೇವೆ ನೀಡಿವೆ. ಯಾರೂ ಸ್ಪರ್ಶಿಸದ ಕುಷ್ಠರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಯೇಸು ಕ್ರಿಸ್ತರ ಶಾಂತಿ ಸಂದೇಶದ ಪ್ರಕಾರ ಸೇವೆ ನೀಡಿದ್ದಾರೆ. ಅಂತಹ ಯೇಸು ಅವರ ಪ್ರತಿಮೆ ಕಾನೂನು ಬದ್ಧವಾಗಿ ಪ್ರತಿಷ್ಠಾಪಿಸುವುದರಲ್ಲಿ ತಪ್ಪೇನಿದೆ?’ ಎಂದು ಪ್ರಶ್ನಿಸಿದರು.</p>.<p>‘ಆದರೆ, ಜನರು ಶಾಂತಿ ನೆಮ್ಮದಿಯಿಂದ ಇರುವುದನ್ನು ಸಹಿಸಲಾಗದ ಪ್ರಭಾಕರ ಭಟ್ಟರು, ಅಲ್ಲಿಯೂ ಕೆಡಿಸಲು ಹೋಗಿದ್ದಾರೆ’ ಎಂದು ಟೀಕಿಸಿದರು.</p>.<p>‘ವಸತಿ, ಅಭಿವೃದ್ಧಿ, ನೆರೆ ಪರಿಹಾರ ಸೇರಿದಂತೆ ಹಲವಾರು ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಇವುಗಳನ್ನು ವಿಪಕ್ಷಗಳು ಪ್ರಶ್ನಿಸುತ್ತಾರೆ ಎಂದು ಸರ್ಕಾರ ಅಧಿವೇಶನವೇ ಕರೆಯುತ್ತಿಲ್ಲ. ಕೂಡಲೇ ಅಧಿವೇಶನ ನಡೆಸಬೇಕು. ನಿಮ್ಮ ಗೊಂದಲಗಳಿಗೆ ಜನರನ್ನು ಬಲಿ ಹಾಕಬೇಡಿ’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>