ಸುಬ್ರಹ್ಮಣ್ಯ (ಕೊಲ್ಲಮೊಗ್ರ): ಗ್ರಾಮಸ್ಥರು ಸಲ್ಲಿಸಿದ ಅಹವಾಲುಗಳನ್ನುತಾಲ್ಲೂಕು ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಪರಿಹರಿಸುತ್ತಾರೆ. ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳನ್ನು ಆದ್ಯತೆಯಲ್ಲಿ ಪರಿಹರಿಸುವಂತೆ ಸೂಚಿಸಲಾಗುವುದು ಎಂದು ವಿಧಾಸನ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಕೊಲ್ಲಮೊಗ್ರ ಹರಿಹರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಕಲಾಪ ವೀಕ್ಷಣೆಗೆ ಅವಕಾಶ ಮಾಡಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಸಮಾರೋಪ ಭಾಷಣ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.