<p><strong>ಪುತ್ತೂರು: </strong>ಸುಮಾರು 50ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸುವ ತಾಲ್ಲೂಕಿನ ಆರ್ಯಾಪು ಗ್ರಾಮ ವ್ಯಾಪ್ತಿಯ ರಸ್ತೆಯೊಂದು ತೀರಾ ನಾದುರಸ್ತಿಯಲ್ಲಿದ್ದು, ಹಲವಾರು ವರ್ಷಗಳಿಂದ ಕ್ಷೇತ್ರದ ಶಾಸಕರು ಸೇರಿದಂತೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆ ಸ್ಪಂದನೆ ಸಿಕ್ಕಿಲ್ಲ ಎಂಬುದು ಆ ಭಾಗದ ಜನತೆಯ ಅಳಲು.</p>.<p>ಆರ್ಯಾಪು ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗುವ ಉದಯಗಿರಿ-ಬೇರಿಕೆ ರಸ್ತೆ ತೀರಾ ಹದಗೆಟ್ಟಿದೆ. ಸಂಪ್ಯ ಅನ್ನಪೂರ್ಣೇಶ್ವರಿ ದೇವಳದ ಸಮೀಪದಿಂದ ಬೇರಿಕೆಗೆ ಹೋಗುವ ಮೂರು ಕಿ.ಮೀ. ವ್ಯಾಪ್ತಿಯ ಈ ರಸ್ತೆಯ ಮುಕ್ಕಾಲು ಕಿ.ಮೀ. ಸಂಚಾರಕ್ಕೆ ಅಯೋಗ್ಯವಾಗಿದೆ. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ಹರಿದು, ಕೆಸರು ಗದ್ದೆಯಂತಾಗುತ್ತದೆ. ದೊಡ್ಡ ಹೊಂಡಗಳಾಗಿ, ಸಂಚಾರ ಕಷ್ಟಕರವಾಗಿದೆ.</p>.<p>ಮಳೆಗಾಲದಲ್ಲಿ ರಸ್ತೆಯ ಅಲ್ಲಲ್ಲಿ ನೀರು ಒಸರುತ್ತದೆ. ಚರಂಡಿ ಇಲ್ಲದ ಕಾರಣ ಒಸರು ನೀರಿನೊಂದಿಗೆ ಮಳೆನೀರು ರಸ್ತೆ ಮೇಲೆಯೇ ಹರಿಯುತ್ತದೆ. ಗುಡ್ಡದಿಂದ ಹರಿದು ಬರುವ ಮಳೆ ನೀರು ಸಹ ರಸ್ತೆ ಮಧ್ಯೆಯೇ ಹರಿದು ಹೋಗುತ್ತದೆ. ಈ ಭಾಗದ ಮಂದಿಗೆ ಈ ರಸ್ತೆಯನ್ನು ಬಿಟ್ಟರೆ ಪರ್ಯಾಯ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಈ ರಸ್ತೆಯನ್ನು ಅವಲಂಬಿಸಿರುವ ಸುಮಾರು 50 ಕುಟುಂಬಗಳು ನರಕಯಾತನೆ ಅನುಭವಿಸುತ್ತವೆ.</p>.<p>ಈ ರಸ್ತೆಯು ಪುತ್ತೂರು ನಗರಸಭೆಯ 30ನೇ ವಾರ್ಡ್ ವ್ಯಾಪ್ತಿಯಲ್ಲಿದೆ. ನಗರಸಭೆಗೆ ಸೇರ್ಪಡೆಗೊಂಡಿರುವ ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಜನಪ್ರತಿನಿಧಿಗಳು ಹೇಳುತ್ತಿದ್ದರೂ, ವಾಸ್ತವದಲ್ಲಿ ಕೆಲಸ ಮಾತ್ರ ಆಗುತ್ತಿಲ್ಲ ಎಂಬುದು ಸ್ಥಳೀಯ ನಿವಾಸಿಗಳ ಆರೋಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ಸುಮಾರು 50ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸುವ ತಾಲ್ಲೂಕಿನ ಆರ್ಯಾಪು ಗ್ರಾಮ ವ್ಯಾಪ್ತಿಯ ರಸ್ತೆಯೊಂದು ತೀರಾ ನಾದುರಸ್ತಿಯಲ್ಲಿದ್ದು, ಹಲವಾರು ವರ್ಷಗಳಿಂದ ಕ್ಷೇತ್ರದ ಶಾಸಕರು ಸೇರಿದಂತೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆ ಸ್ಪಂದನೆ ಸಿಕ್ಕಿಲ್ಲ ಎಂಬುದು ಆ ಭಾಗದ ಜನತೆಯ ಅಳಲು.</p>.<p>ಆರ್ಯಾಪು ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗುವ ಉದಯಗಿರಿ-ಬೇರಿಕೆ ರಸ್ತೆ ತೀರಾ ಹದಗೆಟ್ಟಿದೆ. ಸಂಪ್ಯ ಅನ್ನಪೂರ್ಣೇಶ್ವರಿ ದೇವಳದ ಸಮೀಪದಿಂದ ಬೇರಿಕೆಗೆ ಹೋಗುವ ಮೂರು ಕಿ.ಮೀ. ವ್ಯಾಪ್ತಿಯ ಈ ರಸ್ತೆಯ ಮುಕ್ಕಾಲು ಕಿ.ಮೀ. ಸಂಚಾರಕ್ಕೆ ಅಯೋಗ್ಯವಾಗಿದೆ. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ಹರಿದು, ಕೆಸರು ಗದ್ದೆಯಂತಾಗುತ್ತದೆ. ದೊಡ್ಡ ಹೊಂಡಗಳಾಗಿ, ಸಂಚಾರ ಕಷ್ಟಕರವಾಗಿದೆ.</p>.<p>ಮಳೆಗಾಲದಲ್ಲಿ ರಸ್ತೆಯ ಅಲ್ಲಲ್ಲಿ ನೀರು ಒಸರುತ್ತದೆ. ಚರಂಡಿ ಇಲ್ಲದ ಕಾರಣ ಒಸರು ನೀರಿನೊಂದಿಗೆ ಮಳೆನೀರು ರಸ್ತೆ ಮೇಲೆಯೇ ಹರಿಯುತ್ತದೆ. ಗುಡ್ಡದಿಂದ ಹರಿದು ಬರುವ ಮಳೆ ನೀರು ಸಹ ರಸ್ತೆ ಮಧ್ಯೆಯೇ ಹರಿದು ಹೋಗುತ್ತದೆ. ಈ ಭಾಗದ ಮಂದಿಗೆ ಈ ರಸ್ತೆಯನ್ನು ಬಿಟ್ಟರೆ ಪರ್ಯಾಯ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಈ ರಸ್ತೆಯನ್ನು ಅವಲಂಬಿಸಿರುವ ಸುಮಾರು 50 ಕುಟುಂಬಗಳು ನರಕಯಾತನೆ ಅನುಭವಿಸುತ್ತವೆ.</p>.<p>ಈ ರಸ್ತೆಯು ಪುತ್ತೂರು ನಗರಸಭೆಯ 30ನೇ ವಾರ್ಡ್ ವ್ಯಾಪ್ತಿಯಲ್ಲಿದೆ. ನಗರಸಭೆಗೆ ಸೇರ್ಪಡೆಗೊಂಡಿರುವ ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಜನಪ್ರತಿನಿಧಿಗಳು ಹೇಳುತ್ತಿದ್ದರೂ, ವಾಸ್ತವದಲ್ಲಿ ಕೆಲಸ ಮಾತ್ರ ಆಗುತ್ತಿಲ್ಲ ಎಂಬುದು ಸ್ಥಳೀಯ ನಿವಾಸಿಗಳ ಆರೋಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>