ಆರ್ಯಾಪು ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗುವ ಉದಯಗಿರಿ-ಬೇರಿಕೆ ರಸ್ತೆ ತೀರಾ ಹದಗೆಟ್ಟಿದೆ. ಸಂಪ್ಯ ಅನ್ನಪೂರ್ಣೇಶ್ವರಿ ದೇವಳದ ಸಮೀಪದಿಂದ ಬೇರಿಕೆಗೆ ಹೋಗುವ ಮೂರು ಕಿ.ಮೀ. ವ್ಯಾಪ್ತಿಯ ಈ ರಸ್ತೆಯ ಮುಕ್ಕಾಲು ಕಿ.ಮೀ. ಸಂಚಾರಕ್ಕೆ ಅಯೋಗ್ಯವಾಗಿದೆ. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ಹರಿದು, ಕೆಸರು ಗದ್ದೆಯಂತಾಗುತ್ತದೆ. ದೊಡ್ಡ ಹೊಂಡಗಳಾಗಿ, ಸಂಚಾರ ಕಷ್ಟಕರವಾಗಿದೆ.