ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜಿರೆ: ರಾಜ್ಯಮಟ್ಟದ ವಾಣಿಜ್ಯ, ನಿರ್ವಹಣಾ ಮೇಳ

Last Updated 31 ಜುಲೈ 2022, 5:57 IST
ಅಕ್ಷರ ಗಾತ್ರ

ಉಜಿರೆ: ಗ್ರಾಮೀಣ ಪ್ರದೇಶಗಳಲ್ಲಿ ವಾಣಿಜ್ಯ ಮೇಳವನ್ನು ಆಯೋಜಿಸುವುದರಿಂದ ಉನ್ನತ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಮಾರ್ಗದರ್ಶನ ಮತ್ತು ಪ್ರೇರಣೆ ಸಿಗುತ್ತದೆ ಎಂದು ಉಜಿರೆ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ.ವೈ. ಹೇಳಿದರು.

ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಶನಿವಾರ ರಾಜ್ಯಮಟ್ಟದ ವಾಣಿಜ್ಯ ಮತ್ತು ನಿರ್ವಹಣಾ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಭಿಷೇಕ್ ಜೈನ್ ಮತ್ತು ಕೃಷಿ ತಜ್ಞ ಅವಿನಾಶ್ ರಾವ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಯನ್. ಉದಯಚಂದ್ರ ಅಧ್ಯಕ್ಷತೆ ವಹಿಸಿದರು.‌

ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಪಿ.ವಿಶ್ವನಾಥ್, ಪ್ರೊ.ಸುವೀರ್ ಜೈನ್, ಅಶ್ವಥ್ ಎಚ್.ಆರ್. ಉಪಸ್ಥಿತರಿದ್ದರು.
ಶಶಾಂಕ್ ಜೈನ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT