<p>ಉಜಿರೆ: ‘ರತ್ನತ್ರಯ ಧರ್ಮ ಪಾಲಿಸಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ’ ಎಂದು ಮೂಡುಬಿದಿರೆ ಜೈನಮಠದ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.</p>.<p>ಬಜಿರೆ ರತ್ನವರ್ಮ ಇಂದ್ರ ಅವರ ಸ್ಮರಣಾರ್ಥ ಭಗವಾನ್ ಪಾರ್ಶ್ವನಾಥಸ್ವಾಮಿ ಬಸದಿಯಲ್ಲಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಂಗಲ ಪ್ರವಚನ ನೀಡಿದರು.</p>.<p>ನಿವೃತ್ತ ಮುಖ್ಯಶಿಕ್ಷಕರಾದ ಮುನಿ ರಾಜ ರೆಂಜಾಳ, ಜಯರಾಮ ಶೆಟ್ಟಿ, ಉಜಿರೆಯ ಬಿ. ಸೋಮಶೇಖರ ಶೆಟ್ಟಿ ನುಡಿನಮನ ಸಲ್ಲಿಸಿದರು. ಮುಖಂಡ ರಾದ ಕೆ. ಅಭಯಚಂದ್ರ ಜೈನ್, ಕೆ. ಗಂಗಾ ಧರ ಗೌಡ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶ್ರದ್ಧಾಂಜಲಿ ಅರ್ಪಿಸಿದರು.</p>.<p>ಅಗ್ರೋದಕ ಮೆರವಣಿಗೆ ಬಳಿಕ ಬಸದಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ 216 ಕಲಶ ಅಭಿಷೇಕ, ದೇವರ ಉತ್ಸವ, ಬಾಹುಬಲಿ ಸ್ವಾಮಿಗೆ ಪಾದಾ ಭಿಷೇಕ ನಡೆಸಲಾಯಿತು. ‘ಮುಕ್ತಿಪಥದ ಬೆಳಕು’ ಎಂಬ ಕೃತಿ ವಿತರಿಸಲಾಯಿತು.</p>.<p>ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ಡಾ. ಮಹಾವೀರ ಜೈನ್ ಮೂಡುಬಿದಿರೆ, ಕೃಷ್ಣರಾಜ ಹೆಗ್ಡೆ ಭಾಗವಹಿಸಿದ್ದರು. ಮಹಾವೀರ ಜೈನ್ ಇಚಿಲಂಪಾಡಿ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-29-1722563826</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ‘ರತ್ನತ್ರಯ ಧರ್ಮ ಪಾಲಿಸಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ’ ಎಂದು ಮೂಡುಬಿದಿರೆ ಜೈನಮಠದ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.</p>.<p>ಬಜಿರೆ ರತ್ನವರ್ಮ ಇಂದ್ರ ಅವರ ಸ್ಮರಣಾರ್ಥ ಭಗವಾನ್ ಪಾರ್ಶ್ವನಾಥಸ್ವಾಮಿ ಬಸದಿಯಲ್ಲಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಂಗಲ ಪ್ರವಚನ ನೀಡಿದರು.</p>.<p>ನಿವೃತ್ತ ಮುಖ್ಯಶಿಕ್ಷಕರಾದ ಮುನಿ ರಾಜ ರೆಂಜಾಳ, ಜಯರಾಮ ಶೆಟ್ಟಿ, ಉಜಿರೆಯ ಬಿ. ಸೋಮಶೇಖರ ಶೆಟ್ಟಿ ನುಡಿನಮನ ಸಲ್ಲಿಸಿದರು. ಮುಖಂಡ ರಾದ ಕೆ. ಅಭಯಚಂದ್ರ ಜೈನ್, ಕೆ. ಗಂಗಾ ಧರ ಗೌಡ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶ್ರದ್ಧಾಂಜಲಿ ಅರ್ಪಿಸಿದರು.</p>.<p>ಅಗ್ರೋದಕ ಮೆರವಣಿಗೆ ಬಳಿಕ ಬಸದಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ 216 ಕಲಶ ಅಭಿಷೇಕ, ದೇವರ ಉತ್ಸವ, ಬಾಹುಬಲಿ ಸ್ವಾಮಿಗೆ ಪಾದಾ ಭಿಷೇಕ ನಡೆಸಲಾಯಿತು. ‘ಮುಕ್ತಿಪಥದ ಬೆಳಕು’ ಎಂಬ ಕೃತಿ ವಿತರಿಸಲಾಯಿತು.</p>.<p>ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ಡಾ. ಮಹಾವೀರ ಜೈನ್ ಮೂಡುಬಿದಿರೆ, ಕೃಷ್ಣರಾಜ ಹೆಗ್ಡೆ ಭಾಗವಹಿಸಿದ್ದರು. ಮಹಾವೀರ ಜೈನ್ ಇಚಿಲಂಪಾಡಿ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-29-1722563826</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>