<p><strong>ಉಜಿರೆ:</strong> ಆರೋಗ್ಯವೇ ಭಾಗ್ಯವಾಗಿದ್ದು, ದೇಶದ ಎಲ್ಲ ನಾಗರಿಕರೂ ಆರೋಗ್ಯವಂತರಾದರೆ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.</p>.<p>ಬೆಳ್ತಂಗಡಿ ರೋಟರಿ ಕ್ಲಬ್, ಎಸ್ಡಿಎಂ ಶಿಕ್ಷಣಸಂಸ್ಥೆಗಳು, ವ್ಯಾಯಾಮ್ ಉಜಿರೆ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ 5 ಕಿ.ಮೀ. ಮಳೆಯಲ್ಲಿ ಓಟ (ರೈನಥಾನ್) ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳು ಮತ್ತು ಯುವಜನತೆ ದೇಶದ ಅಮೂಲ್ಯ ಸಂಪನ್ಮೂಲವಾಗಿದ್ದು, ಯಾವುದೇ ಸಂದರ್ಭದಲ್ಲೂ ಮದ್ಯವ್ಯಸನ ಹಾಗೂ ಇತರ ದುಶ್ಚಟಗಳಿಗೆ ಬಲಿಯಾಗಬಾರದು. ಇದು ನಮ್ಮೆಲ್ಲರ ಮನದ ಮಾತು, ಮನೆಯ ಮಾತು ಹಾಗೂ ಗುರು-ಹಿರಿಯರ ಆಶಯ ಮತ್ತು ಅಪೇಕ್ಷೆಯಾಗಿದೆ ಎಂದರು.</p>.<p>ಮಳೆಯಲ್ಲಿ ಓಟದ ಮೂಲಕ ವ್ಯಸನಮುಕ್ತ ಸಮಾಜಕ್ಕಾಗಿ ಅರಿವು, ಜಾಗೃತಿ ಮೂಡಿಸುವುದು ಪವಿತ್ರ ಕಾರ್ಯವಾಗಿದೆ. ಸಾಮಾಜಿಕ ಕ್ರಾಂತಿ ಹಾಗೂ ಸುಧಾರಣೆಗೆ ನಾಂದಿಯಾಗಿದೆ. ನಿಮ್ಮ ಬದ್ಧತೆಯೊಂದಿಗೆ ನಾವೆಲ್ಲರೂ ಇದ್ದೇವೆ. ಇದು ಸ್ಪರ್ಧೆಯಲ್ಲ, ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.</p>.<p>ಮಂಗಳೂರು ಸೈಬರ್ ಪೊಲೀಸ್ ಠಾಣೆಯ ಡಿವೈಎಸ್ಪಿ ಮಂಜುನಾಥ್ ಆರ್.ಜಿ. ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ವರ್ಮ, ಸೋನಿಯಾವರ್ಮ, ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಭಾಗವಹಿಸಿದ್ದರು.</p>.<p>ವಕೀಲ ಬಿ.ಕೆ.ಧನಂಜಯ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.</p>.<p>ಸ್ಪರ್ಧೆಯ ಫಲಿತಾಂಶ: ಪುರುಷರ ವಿಭಾಗ: ಶಿವಾನಂದ ಚಿಗಾರಿ, ಬಾಗಲಕೋಟೆ (ಪ್ರಥಮ– ₹ 10 ಸಾವಿರ ನಗದು, ಚಿನ್ನದ ಫಲಕ), ನಾಗರಾಜ್ ಹುಬ್ಬಳ್ಳಿ (ದ್ವಿತೀಯ– ₹ 7 ಸಾವಿರ ನಗದು, ಬೆಳ್ಳಿ ಪದಕ), ರಂಗಣ್ಣ, ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು, ಎಡಪದವು, ಮೂಡುಬಿದಿರೆ (ತೃತೀಯ– ₹ ಸಾವಿರ ನಗದು, ಕಂಚಿನ ಪದಕ).</p>.<p>ಮಹಿಳೆಯರ ವಿಭಾಗ: ಶಹಿನ್, ಎಸ್.ಡಿ., ಧಾರವಾಡ (ಪ್ರಥಮ ₹ 10ಸಾವಿರ ನಗದು, ಚಿನ್ನದ ಪದಕ), <br> ಚರಿಷ್ಮಾ ಆಳ್ವಾಸ್ ಕಾಲೇಜು, ಮೂಡುಬಿದಿರೆ (ದ್ವಿತೀಯ– ₹ 7ಸಾವಿರ ನಗದು, ಬೆಳ್ಳಿ ಪದಕ), ಪ್ರಣಮ್ಯಾ, ಆಳ್ವಾಸ್ ಕಾಲೇಜು, ಮೂಡುಬಿದಿರೆ (ತೃತೀಯ–₹ 5 ಸಾವಿರ ನಗದು ಮತ್ತು ಕಂಚಿನ ಪದಕ).</p>.<p>ಸಮಾರೋಪದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಬಹುಮಾನ ವಿತರಿಸಿದರು.</p>.<h2>ಧರ್ಮಸ್ಥಳದಲ್ಲಿ ಜನಸ್ಪಂದನಾ ಸಭೆ ನಾಳೆ</h2>.<p>ಉಜಿರೆ: ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜುಲೈ 1ರಂದು ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳದ ಗ್ರಾಮ ಪಂಚಾಯಿತಿ ಬಳಿ ಇರುವ ನೇತ್ರಾವತಿ ಸಭಾಂಗಣದಲ್ಲಿ ಜನಸ್ಪಂದನಾ ಸಭೆ ನಡೆಯಲಿದೆ ಎಂದು ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.</p>.<p>ತಾಲ್ಲೂಕು ಮಟ್ಟದ ಎಲ್ಲ ಇಲಾಖಾಧಿಕಾರಿಗಳು, ಗ್ರಾಮಮಟ್ಟದ ಅಧಿಕಾರಿಗಳು ಇಲಾಖೆಗಳ ಯೋಜನಾ ಪ್ರಗತಿ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಆರೋಗ್ಯವೇ ಭಾಗ್ಯವಾಗಿದ್ದು, ದೇಶದ ಎಲ್ಲ ನಾಗರಿಕರೂ ಆರೋಗ್ಯವಂತರಾದರೆ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.</p>.<p>ಬೆಳ್ತಂಗಡಿ ರೋಟರಿ ಕ್ಲಬ್, ಎಸ್ಡಿಎಂ ಶಿಕ್ಷಣಸಂಸ್ಥೆಗಳು, ವ್ಯಾಯಾಮ್ ಉಜಿರೆ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ 5 ಕಿ.ಮೀ. ಮಳೆಯಲ್ಲಿ ಓಟ (ರೈನಥಾನ್) ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳು ಮತ್ತು ಯುವಜನತೆ ದೇಶದ ಅಮೂಲ್ಯ ಸಂಪನ್ಮೂಲವಾಗಿದ್ದು, ಯಾವುದೇ ಸಂದರ್ಭದಲ್ಲೂ ಮದ್ಯವ್ಯಸನ ಹಾಗೂ ಇತರ ದುಶ್ಚಟಗಳಿಗೆ ಬಲಿಯಾಗಬಾರದು. ಇದು ನಮ್ಮೆಲ್ಲರ ಮನದ ಮಾತು, ಮನೆಯ ಮಾತು ಹಾಗೂ ಗುರು-ಹಿರಿಯರ ಆಶಯ ಮತ್ತು ಅಪೇಕ್ಷೆಯಾಗಿದೆ ಎಂದರು.</p>.<p>ಮಳೆಯಲ್ಲಿ ಓಟದ ಮೂಲಕ ವ್ಯಸನಮುಕ್ತ ಸಮಾಜಕ್ಕಾಗಿ ಅರಿವು, ಜಾಗೃತಿ ಮೂಡಿಸುವುದು ಪವಿತ್ರ ಕಾರ್ಯವಾಗಿದೆ. ಸಾಮಾಜಿಕ ಕ್ರಾಂತಿ ಹಾಗೂ ಸುಧಾರಣೆಗೆ ನಾಂದಿಯಾಗಿದೆ. ನಿಮ್ಮ ಬದ್ಧತೆಯೊಂದಿಗೆ ನಾವೆಲ್ಲರೂ ಇದ್ದೇವೆ. ಇದು ಸ್ಪರ್ಧೆಯಲ್ಲ, ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.</p>.<p>ಮಂಗಳೂರು ಸೈಬರ್ ಪೊಲೀಸ್ ಠಾಣೆಯ ಡಿವೈಎಸ್ಪಿ ಮಂಜುನಾಥ್ ಆರ್.ಜಿ. ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ವರ್ಮ, ಸೋನಿಯಾವರ್ಮ, ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಭಾಗವಹಿಸಿದ್ದರು.</p>.<p>ವಕೀಲ ಬಿ.ಕೆ.ಧನಂಜಯ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.</p>.<p>ಸ್ಪರ್ಧೆಯ ಫಲಿತಾಂಶ: ಪುರುಷರ ವಿಭಾಗ: ಶಿವಾನಂದ ಚಿಗಾರಿ, ಬಾಗಲಕೋಟೆ (ಪ್ರಥಮ– ₹ 10 ಸಾವಿರ ನಗದು, ಚಿನ್ನದ ಫಲಕ), ನಾಗರಾಜ್ ಹುಬ್ಬಳ್ಳಿ (ದ್ವಿತೀಯ– ₹ 7 ಸಾವಿರ ನಗದು, ಬೆಳ್ಳಿ ಪದಕ), ರಂಗಣ್ಣ, ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು, ಎಡಪದವು, ಮೂಡುಬಿದಿರೆ (ತೃತೀಯ– ₹ ಸಾವಿರ ನಗದು, ಕಂಚಿನ ಪದಕ).</p>.<p>ಮಹಿಳೆಯರ ವಿಭಾಗ: ಶಹಿನ್, ಎಸ್.ಡಿ., ಧಾರವಾಡ (ಪ್ರಥಮ ₹ 10ಸಾವಿರ ನಗದು, ಚಿನ್ನದ ಪದಕ), <br> ಚರಿಷ್ಮಾ ಆಳ್ವಾಸ್ ಕಾಲೇಜು, ಮೂಡುಬಿದಿರೆ (ದ್ವಿತೀಯ– ₹ 7ಸಾವಿರ ನಗದು, ಬೆಳ್ಳಿ ಪದಕ), ಪ್ರಣಮ್ಯಾ, ಆಳ್ವಾಸ್ ಕಾಲೇಜು, ಮೂಡುಬಿದಿರೆ (ತೃತೀಯ–₹ 5 ಸಾವಿರ ನಗದು ಮತ್ತು ಕಂಚಿನ ಪದಕ).</p>.<p>ಸಮಾರೋಪದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಬಹುಮಾನ ವಿತರಿಸಿದರು.</p>.<h2>ಧರ್ಮಸ್ಥಳದಲ್ಲಿ ಜನಸ್ಪಂದನಾ ಸಭೆ ನಾಳೆ</h2>.<p>ಉಜಿರೆ: ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜುಲೈ 1ರಂದು ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳದ ಗ್ರಾಮ ಪಂಚಾಯಿತಿ ಬಳಿ ಇರುವ ನೇತ್ರಾವತಿ ಸಭಾಂಗಣದಲ್ಲಿ ಜನಸ್ಪಂದನಾ ಸಭೆ ನಡೆಯಲಿದೆ ಎಂದು ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.</p>.<p>ತಾಲ್ಲೂಕು ಮಟ್ಟದ ಎಲ್ಲ ಇಲಾಖಾಧಿಕಾರಿಗಳು, ಗ್ರಾಮಮಟ್ಟದ ಅಧಿಕಾರಿಗಳು ಇಲಾಖೆಗಳ ಯೋಜನಾ ಪ್ರಗತಿ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>