<p><strong>ಉಜಿರೆ</strong> (ದಕ್ಷಿಣ ಕನ್ನಡ): ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ, ಸಾಧನೆ ಶ್ಲಾಘನೀಯ ಎಂದು ಕೆನರಾ ಬ್ಯಾಂಕ್ನ ಮಹಾಪ್ರಬಂಧಕ ಎಂ.ಭಾಸ್ಕರ ಚಕ್ರವರ್ತಿ ಹೇಳಿದರು.</p>.<p>ಧರ್ಮಸ್ಥಳದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್ಸೆಟ್ ಸಂಸ್ಥೆಗಳ) ನಿರ್ದೇಶಕರ ವಾರ್ಷಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಉಜಿರೆಯಲ್ಲಿ ಆರಂಭಿಸಿದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ ಮಾದರಿಯಾಗಿದ್ದು, ಕೇಂದ್ರ ಸರ್ಕಾರವೂ ಮಾನ್ಯತೆ ನೀಡಿದೆ. ದೇಶದೆಲ್ಲೆಡೆ ಇಂದು 670 ಸಂಸ್ಥೆಗಳು ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ ನೀಡುತ್ತಿವೆ ಎಂದರು.</p>.<p>ಕೌಶಲಾಭಿವೃದ್ಧಿ ಇಂದು ಅಗತ್ಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಗೃಹನಿರ್ಮಾಣ ಕಾರ್ಮಿಕರು ಹಾಗೂ ಇತರ ಕುಶಲಕರ್ಮಿಗಳ ಬೇಡಿಕೆ ಹೆಚ್ಚಾಗುತ್ತಿದೆ. ಈ ಕಾರಣದಿಂದ ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಸಂಸ್ಥೆಗಳ ಪ್ರಗತಿ, ಸಾಧನೆ ಗುರುತಿಸಿ ಹೊಸ ಯೋಜನೆಗಳನ್ನು ರೂಪಿಸುವುದೇ ವಾರ್ಷಿಕ ಸಮ್ಮೇಳನದ ಉದ್ದೇಶವಾಗಿದೆ. ನಿರ್ದೇಶಕರು ಮತ್ತು ಸಿಬ್ಬಂದಿ ಉತ್ತಮ ಗುಣಮಟ್ಟದ ತರಬೇತಿಗೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.</p>.<p>ರುಡ್ಸೆಟ್ ಸಂಸ್ಥೆಗಳ ರಾಷ್ಟ್ರೀಯ ನಿಯಂತ್ರಕ ಬೆಂಗಳೂರಿನ ಆರ್.ಆರ್.ಸಿಂಗ್ ಮಾತನಾಡಿ, ತರಬೇತಿ ವೇಳೆ ನಿರುದ್ಯೋಗಿಗಳಲ್ಲಿ ನಾಯಕತ್ವ ಗುಣವನ್ನೂ ಬೆಳೆಸಬೇಕು ಎಂದು ಹೇಳಿದರು.</p>.<p>ರುಡ್ಸೆಟ್ ಸಂಸ್ಥೆಗಳ ಮಹಾನಿರ್ದೇಶಕ ರಾಜು ಎನ್.ಕೋರಿ ಮಾತನಾಡಿ, ಗ್ರಾಮೀಣ ಪ್ರದೇಶದ ಬೇಡಿಕೆಗೆ ಅನುಗುಣವಾಗಿ ಹೊಸತನದ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು.</p>.<p>ಉನ್ನತ ಸಾಧನೆ ಮಾಡಿದ ರುಡ್ಸೆಟ್ ಸಂಸ್ಥೆಗಳನ್ನು ಗೌರವಿಸಲಾಯಿತು.</p>.<p>ಆರ್ಥಿಕ ಆದಾಯ: ರುಡ್ಸೆಟ್ ಸಂಸ್ಥೆ, ಒಂಗೋಲ್ (ಪ್ರಥಮ), ರುಡ್ಸೆಟ್ ಸಂಸ್ಥೆ, ಧಾರವಾಡ (ದ್ವಿತೀಯ).<br /> ವಾರ್ಷಿಕ ಕಾರ್ಯಯೋಜನೆ: ರುಡ್ಸೆಟ್ ಸಂಸ್ಥೆ, ವಿಜಯಪುರ (ಪ್ರಥಮ), ರುಡ್ಸೆಟ್ ಸಂಸ್ಥೆ ಹಾಜಿಪುರ (ದ್ವಿತೀಯ).</p>.<p>ರುಡ್ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯಕುಮಾರ್ ಸ್ವಾಗತಿಸಿದರು. ಉಜಿರೆ ಸಂಸ್ಥೆಯ ನಿರ್ದೇಶಕ ಅಜೇಯ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong> (ದಕ್ಷಿಣ ಕನ್ನಡ): ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ, ಸಾಧನೆ ಶ್ಲಾಘನೀಯ ಎಂದು ಕೆನರಾ ಬ್ಯಾಂಕ್ನ ಮಹಾಪ್ರಬಂಧಕ ಎಂ.ಭಾಸ್ಕರ ಚಕ್ರವರ್ತಿ ಹೇಳಿದರು.</p>.<p>ಧರ್ಮಸ್ಥಳದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್ಸೆಟ್ ಸಂಸ್ಥೆಗಳ) ನಿರ್ದೇಶಕರ ವಾರ್ಷಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಉಜಿರೆಯಲ್ಲಿ ಆರಂಭಿಸಿದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ ಮಾದರಿಯಾಗಿದ್ದು, ಕೇಂದ್ರ ಸರ್ಕಾರವೂ ಮಾನ್ಯತೆ ನೀಡಿದೆ. ದೇಶದೆಲ್ಲೆಡೆ ಇಂದು 670 ಸಂಸ್ಥೆಗಳು ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ ನೀಡುತ್ತಿವೆ ಎಂದರು.</p>.<p>ಕೌಶಲಾಭಿವೃದ್ಧಿ ಇಂದು ಅಗತ್ಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಗೃಹನಿರ್ಮಾಣ ಕಾರ್ಮಿಕರು ಹಾಗೂ ಇತರ ಕುಶಲಕರ್ಮಿಗಳ ಬೇಡಿಕೆ ಹೆಚ್ಚಾಗುತ್ತಿದೆ. ಈ ಕಾರಣದಿಂದ ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಸಂಸ್ಥೆಗಳ ಪ್ರಗತಿ, ಸಾಧನೆ ಗುರುತಿಸಿ ಹೊಸ ಯೋಜನೆಗಳನ್ನು ರೂಪಿಸುವುದೇ ವಾರ್ಷಿಕ ಸಮ್ಮೇಳನದ ಉದ್ದೇಶವಾಗಿದೆ. ನಿರ್ದೇಶಕರು ಮತ್ತು ಸಿಬ್ಬಂದಿ ಉತ್ತಮ ಗುಣಮಟ್ಟದ ತರಬೇತಿಗೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.</p>.<p>ರುಡ್ಸೆಟ್ ಸಂಸ್ಥೆಗಳ ರಾಷ್ಟ್ರೀಯ ನಿಯಂತ್ರಕ ಬೆಂಗಳೂರಿನ ಆರ್.ಆರ್.ಸಿಂಗ್ ಮಾತನಾಡಿ, ತರಬೇತಿ ವೇಳೆ ನಿರುದ್ಯೋಗಿಗಳಲ್ಲಿ ನಾಯಕತ್ವ ಗುಣವನ್ನೂ ಬೆಳೆಸಬೇಕು ಎಂದು ಹೇಳಿದರು.</p>.<p>ರುಡ್ಸೆಟ್ ಸಂಸ್ಥೆಗಳ ಮಹಾನಿರ್ದೇಶಕ ರಾಜು ಎನ್.ಕೋರಿ ಮಾತನಾಡಿ, ಗ್ರಾಮೀಣ ಪ್ರದೇಶದ ಬೇಡಿಕೆಗೆ ಅನುಗುಣವಾಗಿ ಹೊಸತನದ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು.</p>.<p>ಉನ್ನತ ಸಾಧನೆ ಮಾಡಿದ ರುಡ್ಸೆಟ್ ಸಂಸ್ಥೆಗಳನ್ನು ಗೌರವಿಸಲಾಯಿತು.</p>.<p>ಆರ್ಥಿಕ ಆದಾಯ: ರುಡ್ಸೆಟ್ ಸಂಸ್ಥೆ, ಒಂಗೋಲ್ (ಪ್ರಥಮ), ರುಡ್ಸೆಟ್ ಸಂಸ್ಥೆ, ಧಾರವಾಡ (ದ್ವಿತೀಯ).<br /> ವಾರ್ಷಿಕ ಕಾರ್ಯಯೋಜನೆ: ರುಡ್ಸೆಟ್ ಸಂಸ್ಥೆ, ವಿಜಯಪುರ (ಪ್ರಥಮ), ರುಡ್ಸೆಟ್ ಸಂಸ್ಥೆ ಹಾಜಿಪುರ (ದ್ವಿತೀಯ).</p>.<p>ರುಡ್ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯಕುಮಾರ್ ಸ್ವಾಗತಿಸಿದರು. ಉಜಿರೆ ಸಂಸ್ಥೆಯ ನಿರ್ದೇಶಕ ಅಜೇಯ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>