ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ಸರ್ಕಾರ ಸಚಿವ ಸಂಪುಟ ಸಭೆ ನಡೆಸಲು ಹಾಗೂ ಈ ಕುರಿತಂತೆ ಯಾವುದೇ ಕ್ರಮಕ್ಕೆ ಮುಂದಾಗಲು ಕೋರ್ಟ್ ಯಾಕೆ ಮಧ್ಯ ಪ್ರವೇಶಿಸಬೇಕು. ಅದನ್ನು ಶಾಸಕಾಂಗ ನಿರ್ಧರಿಸುತ್ತದೆ ಅಲ್ಲವೇ? ಎಂದ ಪೀಠ, ಒಂದು ವೇಳೆ ಕಾನೂನಿನ ತೊಡಕು ಇದ್ದರೆ ಅದನ್ನು ಕೋರ್ಟ್ ನಿರ್ಧರಿಸುತ್ತದೆ. ಆದಾಗ್ಯೂ ಸರ್ಕಾರದ ಯಾವುದೇ ನಿರ್ಧಾರ ಈಗಾಗಲೇ ಈ ಕೋರ್ಟ್ ನೀಡಿರುವ ಮಧ್ಯಂತರ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಒಳಗೊಂಡ ಪೀಠವು ಉಚ್ಚರಿಸಿತು.