ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್ ಮತ್ತು ಮಂಜುಳಾ ದಂಪತಿಯ ಪುತ್ರ ಪೂರ್ವಜ್ (14) ಮೃತ ಬಾಲಕ. ಈತ 9ನೇ ತರಗತಿಯಲ್ಲಿ ಓದುತ್ತಿದ್ದ. ಶನಿವಾರ ಆತನ ತಾಯಿಯ ಜನ್ಮದಿನವಿತ್ತು. ಶಾಲಾ ಆಡಳಿತ
ಮಂಡಳಿಯ ನಿಯಮದಂತೆ ಹಾಸ್ಟೆಲ್ ವಾರ್ಡನ್, ಬಾಲಕನಿಗೆ ಮೊಬೈಲ್ ನೀಡಿರಲಿಲ್ಲ. ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ ಬಾಲಕ ಡೆತ್ನೋಟ್ ಬರೆದಿಟ್ಟು ಹಾಸ್ಟೆಲ್ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್ ಶವ ನೋಡಿ, ವಾರ್ಡನ್ ಗಮನಕ್ಕೆ ತಂದಿದ್ದಾನೆ.