<p><strong>ಉಳ್ಳಾಲ</strong>: ಕೆಲವೇ ದಿನಗಳಲ್ಲಿ ಇಸ್ರೇಲ್ಗೆ ತೆರಳಬೇಕಿದ್ದ ವ್ಯಕ್ತಿ ಮನೆಯೊಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಉಳ್ಳಾಲ ಹೊಯ್ಗೆ ಎಂಬಲ್ಲಿನ ದಿ.ಜೆರಿ ಡಿಸೋಜ ಮತ್ತು ಇಸಾಬೆಲ್ಲ ಎಂಬುವರ ಪುತ್ರ ಸೂರ್ಯಪ್ರಕಾಶ್ ಡಿಸೋಜ (42) ಮೃತಪಟ್ಟವರು.</p>.<p>ಒಂದು ವರ್ಷದಿಂದ ಇಸ್ರೇಲ್ ದೇಶದಲ್ಲಿ ಉದ್ಯೋಗದಲ್ಲಿದ್ದ ಅವರು, ಅಲ್ಲಿಯೇ ಉದ್ಯೋಗದಲ್ಲಿರುವ ಸಹೋದರಿ ಜೊತೆ ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದರು. ಸೂರ್ಯಪ್ರಕಾಶ್, ಮೇ 17ರಂದು ವಾಪಸಾಗುವವರಿದ್ದರು. ಎದೆ ಭಾಗದಲ್ಲಿ ನೋವು ನಿರಂತರವಾಗಿ ಇರುವುದರ ಬಗ್ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಈ ಕುರಿತು ಡೆತ್ ನೋಟ್ನಲ್ಲಿ ಬರೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.</p>.<p>ಅವರಿಗೆ ತಾಯಿ, ಮೂವರು ಸಹೋದರಿಯರು, ಸಹೋದರ ಇದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂತಿಮ ಸಂಸ್ಕಾರವು ಮೇ 12ರಂದು ತೊಕ್ಕೊಟ್ಟು ಚರ್ಚ್ನಲ್ಲಿ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-29-1282808966</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ಕೆಲವೇ ದಿನಗಳಲ್ಲಿ ಇಸ್ರೇಲ್ಗೆ ತೆರಳಬೇಕಿದ್ದ ವ್ಯಕ್ತಿ ಮನೆಯೊಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಉಳ್ಳಾಲ ಹೊಯ್ಗೆ ಎಂಬಲ್ಲಿನ ದಿ.ಜೆರಿ ಡಿಸೋಜ ಮತ್ತು ಇಸಾಬೆಲ್ಲ ಎಂಬುವರ ಪುತ್ರ ಸೂರ್ಯಪ್ರಕಾಶ್ ಡಿಸೋಜ (42) ಮೃತಪಟ್ಟವರು.</p>.<p>ಒಂದು ವರ್ಷದಿಂದ ಇಸ್ರೇಲ್ ದೇಶದಲ್ಲಿ ಉದ್ಯೋಗದಲ್ಲಿದ್ದ ಅವರು, ಅಲ್ಲಿಯೇ ಉದ್ಯೋಗದಲ್ಲಿರುವ ಸಹೋದರಿ ಜೊತೆ ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದರು. ಸೂರ್ಯಪ್ರಕಾಶ್, ಮೇ 17ರಂದು ವಾಪಸಾಗುವವರಿದ್ದರು. ಎದೆ ಭಾಗದಲ್ಲಿ ನೋವು ನಿರಂತರವಾಗಿ ಇರುವುದರ ಬಗ್ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಈ ಕುರಿತು ಡೆತ್ ನೋಟ್ನಲ್ಲಿ ಬರೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.</p>.<p>ಅವರಿಗೆ ತಾಯಿ, ಮೂವರು ಸಹೋದರಿಯರು, ಸಹೋದರ ಇದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂತಿಮ ಸಂಸ್ಕಾರವು ಮೇ 12ರಂದು ತೊಕ್ಕೊಟ್ಟು ಚರ್ಚ್ನಲ್ಲಿ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-29-1282808966</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>