<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ಉಳ್ಳಾ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ (65)ಅವರು ಕೇರಳದ ಎಟ್ಟಿಕ್ಕುಳಂನಲ್ಲಿ ಸೋಮವಾರ ನಿಧನರಾದರು.</p><p>ಸಮಸ್ತ ಕೇರಳ ಜಮೀಯತುಲ್ ಉಲಾಮಾ ಕೌನ್ಸಿಲ್ ನ ಸದಸ್ಯರಾಗಿದ್ದ ಅವರು, ಕಾಸರಗೋಡಿನ ಜಾಮಿಯಾ ಸಅದಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.</p><p>ಅವರ ಪಾರ್ಥೀವ ಶರೀರವು ಎಟ್ಟಿಕ್ಕುಳಂ ಅವರ ನಿವಾಸದಲ್ಲಿದೆ. ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕರ್ ಮುಸ್ಲಿಯರ್ ಅವರ ನೇತೃತ್ವದಲ್ಲಿ ಪುತ್ತೂರಿನ ಕೂರತ್ನಲ್ಲಿ ಅವರಿಗೆ ವಿಶೇಷ ಪ್ರಾರ್ಥನೆ ನೆರವೇರಲಿದೆ. </p><p>ಬಳಿಕ ರಾತ್ರಿ 9 ಗಂಟೆಗೆ ಕೂರತ್ ಮಸೀದಿ ವಠಾರದಲ್ಲಿ ಅವರ ದಫನ್ ಕಾರ್ಯ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.</p><p>ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ಉಳ್ಳಾಲ ಖಾಝಿ ಆಗಿದ್ದ ಸಂದರ್ಭದಲ್ಲಿ ಅವರು ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. </p><p>2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.</p><p>ಅಲ್ಲದೇ ಕೆಲವು ವರ್ಷಗಳಿಂದ ಪುತ್ತೂರು ತಾಲೂಕಿನ ಕೂರ ಎಂಬಲ್ಲಿ ಫಝಲ್ ಎಜುಕೇಶನಲ್ ಸೆಂಟರ್ ಸಂಸ್ಥೆ ನಡಸುತ್ತಿದ್ದರು. </p><p>ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಕೇರಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ಆಪ್ತ ಮೂಲ ಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ಉಳ್ಳಾ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ (65)ಅವರು ಕೇರಳದ ಎಟ್ಟಿಕ್ಕುಳಂನಲ್ಲಿ ಸೋಮವಾರ ನಿಧನರಾದರು.</p><p>ಸಮಸ್ತ ಕೇರಳ ಜಮೀಯತುಲ್ ಉಲಾಮಾ ಕೌನ್ಸಿಲ್ ನ ಸದಸ್ಯರಾಗಿದ್ದ ಅವರು, ಕಾಸರಗೋಡಿನ ಜಾಮಿಯಾ ಸಅದಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.</p><p>ಅವರ ಪಾರ್ಥೀವ ಶರೀರವು ಎಟ್ಟಿಕ್ಕುಳಂ ಅವರ ನಿವಾಸದಲ್ಲಿದೆ. ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕರ್ ಮುಸ್ಲಿಯರ್ ಅವರ ನೇತೃತ್ವದಲ್ಲಿ ಪುತ್ತೂರಿನ ಕೂರತ್ನಲ್ಲಿ ಅವರಿಗೆ ವಿಶೇಷ ಪ್ರಾರ್ಥನೆ ನೆರವೇರಲಿದೆ. </p><p>ಬಳಿಕ ರಾತ್ರಿ 9 ಗಂಟೆಗೆ ಕೂರತ್ ಮಸೀದಿ ವಠಾರದಲ್ಲಿ ಅವರ ದಫನ್ ಕಾರ್ಯ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.</p><p>ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ಉಳ್ಳಾಲ ಖಾಝಿ ಆಗಿದ್ದ ಸಂದರ್ಭದಲ್ಲಿ ಅವರು ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. </p><p>2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.</p><p>ಅಲ್ಲದೇ ಕೆಲವು ವರ್ಷಗಳಿಂದ ಪುತ್ತೂರು ತಾಲೂಕಿನ ಕೂರ ಎಂಬಲ್ಲಿ ಫಝಲ್ ಎಜುಕೇಶನಲ್ ಸೆಂಟರ್ ಸಂಸ್ಥೆ ನಡಸುತ್ತಿದ್ದರು. </p><p>ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಕೇರಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ಆಪ್ತ ಮೂಲ ಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>