<p><strong>ಕೊಣಾಜೆ</strong>: ‘ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಾದರೆ ಗ್ರಾಮದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನರಿಂಗಾನದ 30 ಮಂದಿ ಸದಸ್ಯರು ತಮಗೆ ಬರುವ ಗೌರವಧನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡಿ, ಸನ್ಮಾನಿಸಿರುವುದು ಮಾದರಿ ಬೆಳವಣಿಗೆ’ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.</p>.<p>ನರಿಂಗಾನ ಗ್ರಾಮ ಪಂಚಾಯಿತಿಯ ನವೀಕೃತಗೊಂಡ ಕಟ್ಟಡದ ಉದ್ಘಾಟನೆ ಹಾಗೂ ನರಿಂಗಾನ ಗ್ರಾಮದ ಕೊರೊನಾ ವಾರಿಯರ್ಸ್ ಹಾಗೂ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಗ್ರಾಮದ ಅಭಿವೃದ್ಧಿಗಾಗಿ ಮತದಾರರು ಒಂದೇ ಪಕ್ಷದ ಸದಸ್ಯರನ್ನು ಬೆಂಬಲಿಸಿದ್ದಾರೆ. ಅವರ ವಿಶ್ವಾಸಕ್ಕೆ ದ್ರೋಹ ಆಗದಂತೆ ಆಡಳಿತ ಸಮಿತಿ ಒಗ್ಗಟ್ಟಾಗಿ ಕಾರ್ಯಾಚರಿಸಬೇಕು. ಜುಲೈನಲ್ಲಿ ನೂತನ ಪಡಿತರ ಅಂಗಡಿಯು ಗ್ರಾಮದ ಎಲ್ಲರಿಗೂ ಅನುಕೂಲವಾಗುವ ಜಾಗದಲ್ಲಿ ಕಡ್ಡಾಯವಾಗಿ ಆರಂಭವಾಗಬೇಕು’ ಎಂದರು.</p>.<p>‘ಕೊರೊನಾ ವಾರಿಯರ್ಗಳನ್ನು ಗುರುತಿಸಿ, ಗೌರವಿಸುವ ಕಾರ್ಯ ರಾಜ್ಯಕ್ಕೆ ಮಾದರಿ. ಆಶಾ ಕಾರ್ಯಕರ್ತೆಯರು ತಾವು ಸಂಗ್ರಹಿಸುವ ಮನೆ ಮನೆಯ ಡೇಟಾವನ್ನು ಪಂಚಾಯಿತಿಗೂ ನೀಡಬೇಕು. ಅಧಿಕಾರಿಗಳು ಅದನ್ನು ದಾಖಲೆಯಾಗಿ ಇಟ್ಟುಕೊಳ್ಳಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಶೆಟ್ಟಿ, ಉಪಾಧ್ಯಕ್ಷ ನವಾಝ್ ಕಲ್ಲರಕೋಡಿ, ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಪದ್ಮನಾಭ ನರಿಂಗಾನ, ಅಭಿವೃದ್ಧಿ ಅಧಿಕಾರಿ ರಜನಿ, ಕಾರ್ಯದರ್ಶಿ ನಳಿನಿ, ಅಂಗನವಾಡಿ ಮೇಲ್ವಿಚಾರಿಕಿ ಸವಿತಾ, ನವೀನ್., ವೈದ್ಯಾಧಿಕಾರಿ ಮಹಮ್ಮದ್ ಫಯಾಝ್ ಉಪಸ್ಥಿತರಿದ್ದರು.</p>.<p>ಏಳು ಆಶಾ ಕಾರ್ಯಕರ್ತೆಯರು, ಇಬ್ಬರು ಆರೋಗ್ಯ ಸಹಾಯಕಿಯರು, ಈಜುಪಟು ನಾಗರಾಜ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣಾಜೆ</strong>: ‘ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಾದರೆ ಗ್ರಾಮದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನರಿಂಗಾನದ 30 ಮಂದಿ ಸದಸ್ಯರು ತಮಗೆ ಬರುವ ಗೌರವಧನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡಿ, ಸನ್ಮಾನಿಸಿರುವುದು ಮಾದರಿ ಬೆಳವಣಿಗೆ’ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.</p>.<p>ನರಿಂಗಾನ ಗ್ರಾಮ ಪಂಚಾಯಿತಿಯ ನವೀಕೃತಗೊಂಡ ಕಟ್ಟಡದ ಉದ್ಘಾಟನೆ ಹಾಗೂ ನರಿಂಗಾನ ಗ್ರಾಮದ ಕೊರೊನಾ ವಾರಿಯರ್ಸ್ ಹಾಗೂ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಗ್ರಾಮದ ಅಭಿವೃದ್ಧಿಗಾಗಿ ಮತದಾರರು ಒಂದೇ ಪಕ್ಷದ ಸದಸ್ಯರನ್ನು ಬೆಂಬಲಿಸಿದ್ದಾರೆ. ಅವರ ವಿಶ್ವಾಸಕ್ಕೆ ದ್ರೋಹ ಆಗದಂತೆ ಆಡಳಿತ ಸಮಿತಿ ಒಗ್ಗಟ್ಟಾಗಿ ಕಾರ್ಯಾಚರಿಸಬೇಕು. ಜುಲೈನಲ್ಲಿ ನೂತನ ಪಡಿತರ ಅಂಗಡಿಯು ಗ್ರಾಮದ ಎಲ್ಲರಿಗೂ ಅನುಕೂಲವಾಗುವ ಜಾಗದಲ್ಲಿ ಕಡ್ಡಾಯವಾಗಿ ಆರಂಭವಾಗಬೇಕು’ ಎಂದರು.</p>.<p>‘ಕೊರೊನಾ ವಾರಿಯರ್ಗಳನ್ನು ಗುರುತಿಸಿ, ಗೌರವಿಸುವ ಕಾರ್ಯ ರಾಜ್ಯಕ್ಕೆ ಮಾದರಿ. ಆಶಾ ಕಾರ್ಯಕರ್ತೆಯರು ತಾವು ಸಂಗ್ರಹಿಸುವ ಮನೆ ಮನೆಯ ಡೇಟಾವನ್ನು ಪಂಚಾಯಿತಿಗೂ ನೀಡಬೇಕು. ಅಧಿಕಾರಿಗಳು ಅದನ್ನು ದಾಖಲೆಯಾಗಿ ಇಟ್ಟುಕೊಳ್ಳಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಶೆಟ್ಟಿ, ಉಪಾಧ್ಯಕ್ಷ ನವಾಝ್ ಕಲ್ಲರಕೋಡಿ, ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಪದ್ಮನಾಭ ನರಿಂಗಾನ, ಅಭಿವೃದ್ಧಿ ಅಧಿಕಾರಿ ರಜನಿ, ಕಾರ್ಯದರ್ಶಿ ನಳಿನಿ, ಅಂಗನವಾಡಿ ಮೇಲ್ವಿಚಾರಿಕಿ ಸವಿತಾ, ನವೀನ್., ವೈದ್ಯಾಧಿಕಾರಿ ಮಹಮ್ಮದ್ ಫಯಾಝ್ ಉಪಸ್ಥಿತರಿದ್ದರು.</p>.<p>ಏಳು ಆಶಾ ಕಾರ್ಯಕರ್ತೆಯರು, ಇಬ್ಬರು ಆರೋಗ್ಯ ಸಹಾಯಕಿಯರು, ಈಜುಪಟು ನಾಗರಾಜ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>