<p><strong>ಉಳ್ಳಾಲ</strong>: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಬೈಕ್ ಅಡ್ಡಗಟ್ಟಿ ಭೀಕರವಾಗಿ ಹತ್ಯೆ ಮಾಡಲಾಗಿದೆ.</p><p>ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ (40) ಹತ್ಯೆಯಾದ ವ್ಯಕ್ತಿ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ.</p><p>'ಮೇಲ್ನೋಟಕ್ಕೆ ಇದು ಕೊಲೆಯೆಂದು ಕಂಡು ಬಂದಿದ್ದು, ತನಿಖೆ ನಡೆಯುತ್ತಿದೆ. ಬಿಎನ್ಎಸ್ ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರಿಫ್ ಮೇಲೆ ಈ ಹಿಂದೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ದಾಖಲಿಸಲಾಗಿತ್ತು' ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.</p><p>ದುಷ್ಕರ್ಮಿಗಳು ಮೇಲ್ಸೇತುವೆ ಬಳಿ ಕಾಯುತ್ತ ಕುಳಿತು, ಆರಿಫ್ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಬಲವಾಗಿ ಹೊಡೆದಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.</p><p>ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲದಿಂದ ಯಾವುದೇ ಪ್ರಕರಣ ಇರಲಿಲ್ಲ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಅವರ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು.</p><p> ಕುದ್ರೋಳಿ ನಿವಾಸಿಯಾಗಿದ್ದ ಆರಿಫ್, ಆರೇಳು ವರ್ಷಗಳಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಮೂವರು ಗಂಡು ಮಕ್ಕಳು, ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಬೈಕ್ ಅಡ್ಡಗಟ್ಟಿ ಭೀಕರವಾಗಿ ಹತ್ಯೆ ಮಾಡಲಾಗಿದೆ.</p><p>ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ (40) ಹತ್ಯೆಯಾದ ವ್ಯಕ್ತಿ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ.</p><p>'ಮೇಲ್ನೋಟಕ್ಕೆ ಇದು ಕೊಲೆಯೆಂದು ಕಂಡು ಬಂದಿದ್ದು, ತನಿಖೆ ನಡೆಯುತ್ತಿದೆ. ಬಿಎನ್ಎಸ್ ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರಿಫ್ ಮೇಲೆ ಈ ಹಿಂದೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ದಾಖಲಿಸಲಾಗಿತ್ತು' ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.</p><p>ದುಷ್ಕರ್ಮಿಗಳು ಮೇಲ್ಸೇತುವೆ ಬಳಿ ಕಾಯುತ್ತ ಕುಳಿತು, ಆರಿಫ್ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಬಲವಾಗಿ ಹೊಡೆದಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.</p><p>ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲದಿಂದ ಯಾವುದೇ ಪ್ರಕರಣ ಇರಲಿಲ್ಲ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಅವರ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು.</p><p> ಕುದ್ರೋಳಿ ನಿವಾಸಿಯಾಗಿದ್ದ ಆರಿಫ್, ಆರೇಳು ವರ್ಷಗಳಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಮೂವರು ಗಂಡು ಮಕ್ಕಳು, ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>