<p>ಉಳ್ಳಾಲ: ಪ್ರಕೃತಿಯಿಂದಲೇ ರೂಪುಗೊಂಡ ದೇಹ-ಭಾವವನ್ನು ಬಳಸಿಕೊಂಡು ಬದುಕುವಾಗ ಪ್ರಕೃತಿಯನ್ನು ಮರೆಯಬಾರದು. ಬದುಕಿಗಾಗಿ ವ್ಯವಹಾರ ಬೇಕು. ಆದರೆ ಬದುಕೇ ವ್ಯವಹಾರವಾಗಬಾರದು ಎಂದು ಕೆನರಾ ಪಿಯು ಕಾಲೇಜಿನ ಉಪನ್ಯಾಸಕ ರಘ ಇಡ್ಕಿದು ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ 'ಬಿತ್ತಿ' ಗೋಡೆ ಬರಹ ಪತ್ರಿಕೆ ಆಯೋಜಿಸಿದ್ದ ಸೃಜನ-ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಬದುಕನ್ನು ಬಿಟ್ಟು ಸಾಹಿತ್ಯವಿಲ್ಲ, ಸಾಹಿತ್ಯದ ಓದು ಬದುಕನ್ನು ಸಂಭ್ರಮಿಸಲು ಕಲಿಸುತ್ತದೆ ಎಂದರು.<br /><br /> ಅಧ್ಯಕ್ಷತೆ ವಹಿಸಿದ್ದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಸೋಮಣ್ಣ ಮಾತನಾಡಿ ಕವಿತೆಯ ಸಾಲುಗಳಲ್ಲಿ ಹೊಸತನ್ನು ಕಾಣಿಸುವ ಕಣ್ಣಿರಬೇಕು ಎಂದರು. ವಿಭಾಗದ ಪ್ರಾಧ್ಯಾಪಕರಾದ ನಾಗಪ್ಪ ಗೌಡ, ಧನಂಜಯ ಕುಂಬ್ಳೆ, ಯಶುಕುಮಾರ್ ಉಪಸ್ಥಿತರಿದ್ದರು.<br /><br /> ವಿದ್ಯಾರ್ಥಿಗಳಾದ ಜಬೀನಾ, ರಾಕೇಶ್, ಸೌಮ್ಯಾ ಟಿ.ಎಸ್, ಪ್ರತೀಕ್ಷಾ, ಸಲೀಂ, ಶ್ರೇಯಸ್ ಮೊದಲಾದವರು ಕವನ ವಾಚನ ಮಾಡಿದರು. ‘ಭಿತ್ತಿ’ ಸಂಪಾದಕಿ ಸಂಧ್ಯಾ ಎನ್ ಮಣಿನಾಲ್ಕೂರು ಸ್ವಾಗತಿಸಿದರು. ದುಶ್ಯಂತ್ ಪ್ರಥಮ ಎಂ.ಎ ವಂದಿಸಿದರು. ರೇಷ್ಮಾ ಎನ್ ಬಾರಿಗ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ಪ್ರಕೃತಿಯಿಂದಲೇ ರೂಪುಗೊಂಡ ದೇಹ-ಭಾವವನ್ನು ಬಳಸಿಕೊಂಡು ಬದುಕುವಾಗ ಪ್ರಕೃತಿಯನ್ನು ಮರೆಯಬಾರದು. ಬದುಕಿಗಾಗಿ ವ್ಯವಹಾರ ಬೇಕು. ಆದರೆ ಬದುಕೇ ವ್ಯವಹಾರವಾಗಬಾರದು ಎಂದು ಕೆನರಾ ಪಿಯು ಕಾಲೇಜಿನ ಉಪನ್ಯಾಸಕ ರಘ ಇಡ್ಕಿದು ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ 'ಬಿತ್ತಿ' ಗೋಡೆ ಬರಹ ಪತ್ರಿಕೆ ಆಯೋಜಿಸಿದ್ದ ಸೃಜನ-ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಬದುಕನ್ನು ಬಿಟ್ಟು ಸಾಹಿತ್ಯವಿಲ್ಲ, ಸಾಹಿತ್ಯದ ಓದು ಬದುಕನ್ನು ಸಂಭ್ರಮಿಸಲು ಕಲಿಸುತ್ತದೆ ಎಂದರು.<br /><br /> ಅಧ್ಯಕ್ಷತೆ ವಹಿಸಿದ್ದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಸೋಮಣ್ಣ ಮಾತನಾಡಿ ಕವಿತೆಯ ಸಾಲುಗಳಲ್ಲಿ ಹೊಸತನ್ನು ಕಾಣಿಸುವ ಕಣ್ಣಿರಬೇಕು ಎಂದರು. ವಿಭಾಗದ ಪ್ರಾಧ್ಯಾಪಕರಾದ ನಾಗಪ್ಪ ಗೌಡ, ಧನಂಜಯ ಕುಂಬ್ಳೆ, ಯಶುಕುಮಾರ್ ಉಪಸ್ಥಿತರಿದ್ದರು.<br /><br /> ವಿದ್ಯಾರ್ಥಿಗಳಾದ ಜಬೀನಾ, ರಾಕೇಶ್, ಸೌಮ್ಯಾ ಟಿ.ಎಸ್, ಪ್ರತೀಕ್ಷಾ, ಸಲೀಂ, ಶ್ರೇಯಸ್ ಮೊದಲಾದವರು ಕವನ ವಾಚನ ಮಾಡಿದರು. ‘ಭಿತ್ತಿ’ ಸಂಪಾದಕಿ ಸಂಧ್ಯಾ ಎನ್ ಮಣಿನಾಲ್ಕೂರು ಸ್ವಾಗತಿಸಿದರು. ದುಶ್ಯಂತ್ ಪ್ರಥಮ ಎಂ.ಎ ವಂದಿಸಿದರು. ರೇಷ್ಮಾ ಎನ್ ಬಾರಿಗ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>