<p>ಮೂಲ್ಕಿ: ಬಜಪೆ ಬಳಿಯ ಅದ್ಯಪಾಡಿ ದೈವಂಗಳಗುಡ್ಡೆ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.15ರಿಂದ 20ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಾ.18ಕ್ಕೆ ರುದ್ರಯಾಗ, 19ರಂದು ಸಹಸ್ರ ನಾಳಿಕೇರ ಮಹಾಗಣಪತಿ ಹೋಮ, 20ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ನಾಗರಾಜ ಶೆಟ್ಟಿ ತಿಳಿಸಿದರು.</p>.<p>ಈಗಾಗಲೇ ₹2 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಕ್ಷೇತ್ರದ ಆಡಳಿತ ಮೊಕ್ತೇಸರ ಎ. ಮಂಜುನಾಥ ಭಂಡಾರಿ ಶೆಡ್ಡೆ ಮಾತನಾಡಿ, ನಾಲ್ಕನೇ ಬಾರಿ ನೀಲಕಂಠ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಾರ್ಚ್ 15ರಂದು ಹೊರೆಕಾಣಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಸಮಿತಿ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಮಾತನಾಡಿ, ಬ್ರಹ್ಮಕಲಶೋತ್ಸವವು ಸನಾತನ ಧರ್ಮದ ಸೂತ್ರಕ್ಕೆ ಅನುಗುಣವಾಗಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುತ್ತಿದೆ. ದೇವಳದಲ್ಲಿ ಮದುವೆ, ಉಪನಯನ ಮುಂತಾದ ಕಾರ್ಯಕ್ರಮಗಳಿಗೆ 18,000 ಚದರ ಅಡಿಗೂ ಮಿಕ್ಕಿದ ವಿಸ್ತೀರ್ಣದ ಸಭಾಂಗಣದ ಜತೆಗೆ ಆಸನಗಳು, ಪಾಕಶಾಲೆಯಲ್ಲದೆ ವಿದ್ಯುತ್ ಅನ್ನು ಇಪ್ಪತ್ತೈದು ವರ್ಷಗಳಿಂದಲೂ ಉಚಿತವಾಗಿ ನೀಡಲಾಗುತ್ತಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟ ಏತಮೊಗರು ದೊಡ್ಡಮನೆ ಬೈಲುಮೂಡುಕರೆ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಭುಜಂಗ ಶೆಟ್ಟಿ ಚೆಪುಗುಡ್ಡೆ ಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಅಡ್ಯಾರ್ ಕಟ್ಟೆ, ದಿವಾಕರ ಸಾಮಾನಿ ಚೇಳಾರು ಗುತ್ತು, ಸತೀಶ್ ಆಳ್ವ ಬೈಲುಮೂಡುಕರೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಶೆಡ್ಡೆ, ಜಯರಾಮ ಕೊಟ್ಟಾರಿ ಶೆಡ್ಡೆ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ರಮಾನಾಥ ಅತ್ತಾರ್, ಡಾ.ಆಶಾಜ್ಯೋತಿ ರೈ, ದೇವದಾಸ್ ನಾಯಕ್, ಅದ್ಯಪಾಡಿ ಗುತ್ತು ರಾಜೀವ್ ಆಳ್ವ, ಬಾಲಕೃಷ್ಣ.ರೈ ಕೊಳಂಬೆಗುತ್ತು, ಅಶ್ವಿನ್ ಬಳ್ಳಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಲ್ಕಿ: ಬಜಪೆ ಬಳಿಯ ಅದ್ಯಪಾಡಿ ದೈವಂಗಳಗುಡ್ಡೆ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.15ರಿಂದ 20ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಾ.18ಕ್ಕೆ ರುದ್ರಯಾಗ, 19ರಂದು ಸಹಸ್ರ ನಾಳಿಕೇರ ಮಹಾಗಣಪತಿ ಹೋಮ, 20ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ನಾಗರಾಜ ಶೆಟ್ಟಿ ತಿಳಿಸಿದರು.</p>.<p>ಈಗಾಗಲೇ ₹2 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಕ್ಷೇತ್ರದ ಆಡಳಿತ ಮೊಕ್ತೇಸರ ಎ. ಮಂಜುನಾಥ ಭಂಡಾರಿ ಶೆಡ್ಡೆ ಮಾತನಾಡಿ, ನಾಲ್ಕನೇ ಬಾರಿ ನೀಲಕಂಠ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಾರ್ಚ್ 15ರಂದು ಹೊರೆಕಾಣಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಸಮಿತಿ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಮಾತನಾಡಿ, ಬ್ರಹ್ಮಕಲಶೋತ್ಸವವು ಸನಾತನ ಧರ್ಮದ ಸೂತ್ರಕ್ಕೆ ಅನುಗುಣವಾಗಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುತ್ತಿದೆ. ದೇವಳದಲ್ಲಿ ಮದುವೆ, ಉಪನಯನ ಮುಂತಾದ ಕಾರ್ಯಕ್ರಮಗಳಿಗೆ 18,000 ಚದರ ಅಡಿಗೂ ಮಿಕ್ಕಿದ ವಿಸ್ತೀರ್ಣದ ಸಭಾಂಗಣದ ಜತೆಗೆ ಆಸನಗಳು, ಪಾಕಶಾಲೆಯಲ್ಲದೆ ವಿದ್ಯುತ್ ಅನ್ನು ಇಪ್ಪತ್ತೈದು ವರ್ಷಗಳಿಂದಲೂ ಉಚಿತವಾಗಿ ನೀಡಲಾಗುತ್ತಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟ ಏತಮೊಗರು ದೊಡ್ಡಮನೆ ಬೈಲುಮೂಡುಕರೆ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಭುಜಂಗ ಶೆಟ್ಟಿ ಚೆಪುಗುಡ್ಡೆ ಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಅಡ್ಯಾರ್ ಕಟ್ಟೆ, ದಿವಾಕರ ಸಾಮಾನಿ ಚೇಳಾರು ಗುತ್ತು, ಸತೀಶ್ ಆಳ್ವ ಬೈಲುಮೂಡುಕರೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಶೆಡ್ಡೆ, ಜಯರಾಮ ಕೊಟ್ಟಾರಿ ಶೆಡ್ಡೆ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ರಮಾನಾಥ ಅತ್ತಾರ್, ಡಾ.ಆಶಾಜ್ಯೋತಿ ರೈ, ದೇವದಾಸ್ ನಾಯಕ್, ಅದ್ಯಪಾಡಿ ಗುತ್ತು ರಾಜೀವ್ ಆಳ್ವ, ಬಾಲಕೃಷ್ಣ.ರೈ ಕೊಳಂಬೆಗುತ್ತು, ಅಶ್ವಿನ್ ಬಳ್ಳಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>