ನಗರದ ಯೇನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾತನಾಡಿದರು. ‘ಮುಖ್ಯಮಂತ್ರಿಯಾಗಿ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ಹಲವಾರು ಸವಾಲುಗಳ ನಡುವೆ ಸರ್ಕಾರ ಒಳ್ಳೆಯ ಆಡಳಿತ ನೀಡಿದೆ. ಈ ವೇಳೆ ನಾನು ಸರ್ಕಾರವನ್ನು ಅಭಿನಂದಿಸುತ್ತೇನೆ. ಪಕ್ಷ ಹೇಳುವುದನ್ನು ಪಾಲಿಸುತ್ತೇನೆ ಎಂದಿರುವ ಯಡಿಯೂರಪ್ಪ ನಮಗೆಲ್ಲ ಆದರ್ಶ ವ್ಯಕ್ತಿ. ರಾಷ್ಟ್ರೀಯ ನಾಯಕರು, ಪಕ್ಷದ ಹಿರಿಯರ ಮಾತಿಗೆ ಗೌರವ ನೀಡುವ ಅವರ ನಡೆ ಕಾರ್ಯಕರ್ತರಿಗೆ ಪ್ರೇರಣೆ’ ಎಂದರು.