ಮಂಗಳೂರು: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ವಾರ್ತಾ ಮತ್ತು ಪ್ರಸಾರ ಇಲಾಖೆಯ ರಾಜ್ಯ ಸಚಿವ ಎಲ್. ಮುರುಗನ್ ಭಾನುವಾರ ನಗರದ ಬೈಕಂಪಾಡಿಯ ಮಂಜುಗಡ್ಡೆ ಘಟಕಗಳಿಗೆ ಭೇಟಿ ನೀಡಿದರು. ನಂತರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳಿಗೆ ಶೀತಲೀಕರಣ ವಾಹನಗಳ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮೀನುಗಾರಿಕೆಯನ್ನು ವೀಕ್ಷಿಸಿದ ಅವರು, ಮೀನುಗಾರರ ಜೊತೆಗೆ ಸಂವಾದ ನಡೆಸಿದರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಸ್ಥಳೀಯ ಶಾಸಕ ಡಾ. ಭರತ್ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೀನುಗಾರಿಕೆ ಇಲಾಖೆ ನಿರ್ದೇಶಕರು, ಅಧಿಕಾರಿಗಳು ಇದ್ದರು.