ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬುಧವಾರ ನಡೆದ 117ನೇ ಕಾಲೇಜು ದಿನಾಚರಣೆಯಲ್ಲಿ ಅವರು ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕಿ ಸುನಂದಾ, ಪ್ರಾಂಶುಪಾಲೆ ಡಾ. ಅನಸೂಯಾ ರೈ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಧೀರಜ್ ಮಾತನಾಡಿದರು. ರಾಜಕೀಯ ವಿಜ್ಞಾನ ವಿಭಾಗ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್ ವಾರ್ಷಿಕ ವರದಿ ವಾಚಿಸಿದರು. ಮಂಗಳೂರು ವಿಶ್ವವಿದ್ಯಾಲಯ 2020ರಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಬಿ.ಎ. ಪದವಿಯಲ್ಲಿ 6ನೇ ರ್ಯಾಂಕ್ ಪಡೆದ ಸಾಯಿ ಸೂರ್ಯ, ಬಿ.ಕಾಂ.ನಲ್ಲಿ 8ನೇ ರ್ಯಾಂಕ್ ಪಡೆದ ಪ್ರಿಯದರ್ಶಿನಿ, ಬಿ.ಎ.ಯಲ್ಲಿ ಒಂಬತ್ತನೇ ರ್ಯಾಂಕ್ ಗಳಿಸಿದ ಸಂಧ್ಯಾ ಹಾಗೂ ಎನ್ಎಸ್ಎಸ್ನಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಅಪರ್ಣಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.