ಚಿಕ್ಕಂದಿನಿಂದಲೇ ಚಿತ್ರರಂಗದ ಆಸಕ್ತಿ: ಪಿಯುಸಿ ಓದಿದ್ದ ಹ್ಯಾರಿಸ್ ಅವರಿಗೆ ಚಿಕ್ಕಂದಿನಿಂದಲೇ ನಾಟಕ, ಚಿತ್ರರಂಗದ ಬಗ್ಗೆ ಆಸಕ್ತಿ ಇತ್ತು. ಶಂಕರ್ನಾಗ್ ಅಭಿಮಾನಿಯಾಗಿದ್ದು ಅವರ ಹೆಸರಿನಲ್ಲಿ ಊರಲ್ಲಿ ಕ್ರಿಕೆಟ್ ಪಂದ್ಯಾಟ ನಡೆಸುತ್ತಿದ್ದರು. ಕಾಶೀನಾಥ್ ಜತೆ ಹಲವು ಕನ್ನಡ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಲಕ್ಷ್ಮಿ, ಬ್ರೇಕಿಂಗ್ ನ್ಯೂಸ್, ಮುತ್ತು ಮಾವುತ, ಚೆಲ್ಲಾಪಿಲ್ಲಿ, ಮಾರ ಎಲ್ಎಲ್ಬಿ ಹೀಗೆ ಹಲವು ಕನ್ನಡ ಚಿತ್ರಗಳಿಗೆ ಮತ್ತು ಪಂಜರದ ಗಿಳಿ, ಮನೆಯೊಂದು ಮೂರುಬಾಗಿಲು, ಚಕ್ರವಾಹನ ಧಾರಾವಾಹಿಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು.