<p>ಉಪ್ಪಿನಂಗಡಿ: ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯೊಬ್ಬರು ಆರ್ಥಿಕ ಸಹಾಯ ಯಾಚಿಸಿ ಮನವಿಯಲ್ಲಿ ಬರೆದಿದ್ದ ಸಂಪರ್ಕ ಸಂಖ್ಯೆಯನ್ನು ಬಳಸಿ ಮಂತ್ರಾಲಯದ ಗುರುರಾಯರ ಮಠದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಆ ವ್ಯಕ್ತಿಯನ್ನೇ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.</p>.<p>ಬೆಳ್ತಂಗಡಿ ತಾಲ್ಲೂಕು ಇಳಂತಿಲ ಗ್ರಾಮದ ನಿವಾಸಿ ಯಶೋಧರ ಸಿಂಗ್ ಎಂಬುವರು ಅನಾರೋಗ್ಯದಿಂದ ಆರ್ಥಿಕ ಸಂಕಷ್ಟಕ್ಕೆ ಈಡಾಗಿದ್ದು, ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಬಂಧುಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡ ವಂಚಕರು, ಮನವಿಯಲ್ಲಿದ್ದ ಯಶೋಧರ ಅವರ ಪುತ್ರ ಸುಧಾಂಷ್ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ‘ನಾವು ಮಂತ್ರಾಲಯದ ರಾಯರ ಮಠದಿಂದ ಮಾತನಾಡುತ್ತಿದ್ದೇವೆ. ನಿಮ್ಮ ಸಮಸ್ಯೆಯ ಬಗ್ಗೆ ತಿಳಿದುಕೊಂಡೆವು. ಮಠದಿಂದ ನಿಮಗೆ ₹ 3 ಲಕ್ಷ ಆರ್ಥಿಕ ನೆರವು ನೀಡುತ್ತೇವೆ. ಆದರೆ, ಸರ್ಕಾರಿ ನಿಯಮದಂತೆ ಶೇ 10ರಷ್ಟು ತೆರಿಗೆ ಪಾವತಿಸಬೇಕಾಗಿರುವುದರಿಂದ ನೀವು ₹ 30 ಸಾವಿರವನ್ನು ನಮಗೆ ಪಾವತಿಸಬೇಕಾಗುತ್ತದೆ’ ಎಂದು ತಿಳಿಸಲಾಯಿತು.</p>.<p>ಸುಧಾಂಷ್, ನನ್ನಲ್ಲಿ ₹ 28 ಸಾವಿರ ಮಾತ್ರ ಇದೆ ಎಂದು ತಿಳಿಸಿದ್ದಕ್ಕೆ ಸರಿ ಅದನ್ನಾದರೂ ಕಳುಹಿಸಿ ಎಂದು ತಿಳಿಸಿದ್ದು, ನಂಬಿದ ಆತ ₹ 28 ಸಾವಿರವನ್ನು ಕಳುಹಿಸಿದ್ದಾರೆ. ₹ 3 ಲಕ್ಷ ಬಾರದೇ ಇದ್ದಾಗ ತಾನು ಮೋಸ ಹೋಗಿರುವುದಾಗಿ ತಿಳಿದು ಪ್ರಕರಣದ ಬಗ್ಗೆ ವಂಚಕನ ವಿರುದ್ಧ ದೂರು ಸಲ್ಲಿಸಿದ್ದಾರೆ. ಧಾರ್ಮಿಕ ಕ್ಷೇತ್ರದ ಹೆಸರು ಬಳಸಿ ವಂಚಿಸುವ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲು ಪೊಲಿಸ್ ಇಲಾಖೆ ಮುಂದಾಗಬೇಕು ಎಂದು ಆಗ್ರಹ ವ್ಯಕ್ತವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-29-2034258324</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಪ್ಪಿನಂಗಡಿ: ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯೊಬ್ಬರು ಆರ್ಥಿಕ ಸಹಾಯ ಯಾಚಿಸಿ ಮನವಿಯಲ್ಲಿ ಬರೆದಿದ್ದ ಸಂಪರ್ಕ ಸಂಖ್ಯೆಯನ್ನು ಬಳಸಿ ಮಂತ್ರಾಲಯದ ಗುರುರಾಯರ ಮಠದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಆ ವ್ಯಕ್ತಿಯನ್ನೇ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.</p>.<p>ಬೆಳ್ತಂಗಡಿ ತಾಲ್ಲೂಕು ಇಳಂತಿಲ ಗ್ರಾಮದ ನಿವಾಸಿ ಯಶೋಧರ ಸಿಂಗ್ ಎಂಬುವರು ಅನಾರೋಗ್ಯದಿಂದ ಆರ್ಥಿಕ ಸಂಕಷ್ಟಕ್ಕೆ ಈಡಾಗಿದ್ದು, ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಬಂಧುಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡ ವಂಚಕರು, ಮನವಿಯಲ್ಲಿದ್ದ ಯಶೋಧರ ಅವರ ಪುತ್ರ ಸುಧಾಂಷ್ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ‘ನಾವು ಮಂತ್ರಾಲಯದ ರಾಯರ ಮಠದಿಂದ ಮಾತನಾಡುತ್ತಿದ್ದೇವೆ. ನಿಮ್ಮ ಸಮಸ್ಯೆಯ ಬಗ್ಗೆ ತಿಳಿದುಕೊಂಡೆವು. ಮಠದಿಂದ ನಿಮಗೆ ₹ 3 ಲಕ್ಷ ಆರ್ಥಿಕ ನೆರವು ನೀಡುತ್ತೇವೆ. ಆದರೆ, ಸರ್ಕಾರಿ ನಿಯಮದಂತೆ ಶೇ 10ರಷ್ಟು ತೆರಿಗೆ ಪಾವತಿಸಬೇಕಾಗಿರುವುದರಿಂದ ನೀವು ₹ 30 ಸಾವಿರವನ್ನು ನಮಗೆ ಪಾವತಿಸಬೇಕಾಗುತ್ತದೆ’ ಎಂದು ತಿಳಿಸಲಾಯಿತು.</p>.<p>ಸುಧಾಂಷ್, ನನ್ನಲ್ಲಿ ₹ 28 ಸಾವಿರ ಮಾತ್ರ ಇದೆ ಎಂದು ತಿಳಿಸಿದ್ದಕ್ಕೆ ಸರಿ ಅದನ್ನಾದರೂ ಕಳುಹಿಸಿ ಎಂದು ತಿಳಿಸಿದ್ದು, ನಂಬಿದ ಆತ ₹ 28 ಸಾವಿರವನ್ನು ಕಳುಹಿಸಿದ್ದಾರೆ. ₹ 3 ಲಕ್ಷ ಬಾರದೇ ಇದ್ದಾಗ ತಾನು ಮೋಸ ಹೋಗಿರುವುದಾಗಿ ತಿಳಿದು ಪ್ರಕರಣದ ಬಗ್ಗೆ ವಂಚಕನ ವಿರುದ್ಧ ದೂರು ಸಲ್ಲಿಸಿದ್ದಾರೆ. ಧಾರ್ಮಿಕ ಕ್ಷೇತ್ರದ ಹೆಸರು ಬಳಸಿ ವಂಚಿಸುವ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲು ಪೊಲಿಸ್ ಇಲಾಖೆ ಮುಂದಾಗಬೇಕು ಎಂದು ಆಗ್ರಹ ವ್ಯಕ್ತವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-29-2034258324</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>