<p><strong>ಮಂಗಳೂರು: </strong>ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮೂಡ)ದಿಂದ ಕೈಗೆತ್ತಿಕೊಳ್ಳಲಾಗಿರುವ ಬಡಾವಣೆಗಳ ಕಾಮಗಾರಿಗಳನ್ನು ತ್ವರಿತಗೊಳಿಸಿ ನಿವೇಶನಗಳನ್ನು ಆದಷ್ಟು ಬೇಗನೆ ಸಾರ್ವಜನಿಕರಿಗೆ ನೀಡಬೇಕು ಎಂದು ನಗಾರಭಿವೃದ್ಧಿ ಸಚಿವ ಬಿ.ಎ. ಬಸವರಾಜ ನಿರ್ದೇಶನ ನೀಡಿದರು.</p>.<p>ನಗರದಲ್ಲಿ ಸೋಮವಾರ ಇಲಾಖಾಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಮೂಡಾದ ಬಡಾವಣೆ ನಿರ್ಮಾಣ ವಿಳಂಬ ಗತಿಯಲ್ಲಿ ಸಾಗುತ್ತಿದೆ. ಇದಕ್ಕೆ ವೇಗ ನೀಡಬೇಕು ಹಾಗೂ ಬಡಾವಣೆಯಲ್ಲಿ ಪತ್ರಕರ್ತರಿಗೆ ಶೇ 5 ಮೀಸಲಾತಿ ನೀಡಿ’ ಎಂದು ಸೂಚನೆ ನೀಡಿದರು.</p>.<p>‘60 ಸಾವಿರ ಎಲ್ಇಡಿ ದೀಪಗಳ ಅಳವಡಿಕೆಗೆ ಸರ್ಕಾರದಿಂದ ಅನುಮತಿ ದೊರೆತಿದ್ದು, ಕಾಮಗಾರಿಗೆ ಬೇಗನೆ ಚಾಲನೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಯ 37 ಐಸಿಯು ಕೊಠಡಿಗಳಿಗೆ ₹ 3.40 ಕೋಟಿ ವೆಚ್ಚದಲ್ಲಿ ದೀಪ ಅಳವಡಿಸುವ ಕಾಮಗಾರಿಯನ್ನು ಸ್ಮಾರ್ಟ್ಸಿಟಿ ವತಿಯಿಂದ ನಡೆಸಲಾಗುತ್ತಿದೆ’ ಎಂದು ಶ್ಲಾಘಿಸಿದರು.</p>.<p>‘ತುಂಬೆ ಅಣೆಕಟ್ಟೆಗೆ ತಡೆಗೋಡೆ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡಿ ಕೊಡಿಬೇಕೆಂದು ಅಲ್ಲಿನ ಶಾಸಕರು ಮತ್ತು ಸಚಿವರ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ₹15 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರ ಕಾಮಗಾರಿಯನ್ನು ಸ್ಮಾರ್ಟ್ಸಿಟಿ ಅಡಿಯಲ್ಲಿ ನಡೆಸಲಾಗುತ್ತದೆ’ ಎಂದು ಸಚಿವರು ತಿಳಿಸಿದರು.</p>.<p>ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಿಂದ ತೊಂದರೆ ಎದುರಿಸಿದವರಿಗೆ ₹1.91 ಕೋಟಿ ಪರಿಹಾರ ನೀಡಲಾಗಿದ್ದು, ಉಳಿದವರಿಗೆ ಅದಷ್ಟು ಬೇಗನೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲಿನ ಚೆಕ್ ಡ್ಯಾಂ ನಿರ್ಮಾಣಕ್ಕೆ ₹5 ಕೋಟಿ ಬಿಡುಗಡೆಯಾಗಿದ್ದು, ಇದರ ಕಾಮಗಾರಿಯೂ ಶೇ 80 ರಷ್ಟು ಮುಕ್ತಾಯವಾಗಿದೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ದಿವಾಕರ್ ಪಾಂಡೇಶ್ವರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮೂಡ)ದಿಂದ ಕೈಗೆತ್ತಿಕೊಳ್ಳಲಾಗಿರುವ ಬಡಾವಣೆಗಳ ಕಾಮಗಾರಿಗಳನ್ನು ತ್ವರಿತಗೊಳಿಸಿ ನಿವೇಶನಗಳನ್ನು ಆದಷ್ಟು ಬೇಗನೆ ಸಾರ್ವಜನಿಕರಿಗೆ ನೀಡಬೇಕು ಎಂದು ನಗಾರಭಿವೃದ್ಧಿ ಸಚಿವ ಬಿ.ಎ. ಬಸವರಾಜ ನಿರ್ದೇಶನ ನೀಡಿದರು.</p>.<p>ನಗರದಲ್ಲಿ ಸೋಮವಾರ ಇಲಾಖಾಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಮೂಡಾದ ಬಡಾವಣೆ ನಿರ್ಮಾಣ ವಿಳಂಬ ಗತಿಯಲ್ಲಿ ಸಾಗುತ್ತಿದೆ. ಇದಕ್ಕೆ ವೇಗ ನೀಡಬೇಕು ಹಾಗೂ ಬಡಾವಣೆಯಲ್ಲಿ ಪತ್ರಕರ್ತರಿಗೆ ಶೇ 5 ಮೀಸಲಾತಿ ನೀಡಿ’ ಎಂದು ಸೂಚನೆ ನೀಡಿದರು.</p>.<p>‘60 ಸಾವಿರ ಎಲ್ಇಡಿ ದೀಪಗಳ ಅಳವಡಿಕೆಗೆ ಸರ್ಕಾರದಿಂದ ಅನುಮತಿ ದೊರೆತಿದ್ದು, ಕಾಮಗಾರಿಗೆ ಬೇಗನೆ ಚಾಲನೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಯ 37 ಐಸಿಯು ಕೊಠಡಿಗಳಿಗೆ ₹ 3.40 ಕೋಟಿ ವೆಚ್ಚದಲ್ಲಿ ದೀಪ ಅಳವಡಿಸುವ ಕಾಮಗಾರಿಯನ್ನು ಸ್ಮಾರ್ಟ್ಸಿಟಿ ವತಿಯಿಂದ ನಡೆಸಲಾಗುತ್ತಿದೆ’ ಎಂದು ಶ್ಲಾಘಿಸಿದರು.</p>.<p>‘ತುಂಬೆ ಅಣೆಕಟ್ಟೆಗೆ ತಡೆಗೋಡೆ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡಿ ಕೊಡಿಬೇಕೆಂದು ಅಲ್ಲಿನ ಶಾಸಕರು ಮತ್ತು ಸಚಿವರ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ₹15 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರ ಕಾಮಗಾರಿಯನ್ನು ಸ್ಮಾರ್ಟ್ಸಿಟಿ ಅಡಿಯಲ್ಲಿ ನಡೆಸಲಾಗುತ್ತದೆ’ ಎಂದು ಸಚಿವರು ತಿಳಿಸಿದರು.</p>.<p>ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಿಂದ ತೊಂದರೆ ಎದುರಿಸಿದವರಿಗೆ ₹1.91 ಕೋಟಿ ಪರಿಹಾರ ನೀಡಲಾಗಿದ್ದು, ಉಳಿದವರಿಗೆ ಅದಷ್ಟು ಬೇಗನೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲಿನ ಚೆಕ್ ಡ್ಯಾಂ ನಿರ್ಮಾಣಕ್ಕೆ ₹5 ಕೋಟಿ ಬಿಡುಗಡೆಯಾಗಿದ್ದು, ಇದರ ಕಾಮಗಾರಿಯೂ ಶೇ 80 ರಷ್ಟು ಮುಕ್ತಾಯವಾಗಿದೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ದಿವಾಕರ್ ಪಾಂಡೇಶ್ವರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>