ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅವರ ವತಿಯಿಂದ ಮಾಸ್ಕ್ ವಿತರಣೆ ನಡೆಯಿತು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಮಹಮ್ಮದ್ ಬಡಗನ್ನೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಮಾಜಿ ಅಧ್ಯಕ್ಷ ಮುರಳಿಧರ ರೈ ಮಠಂತಬೆಟ್ಟು, ನಗರಸಭಾ ಸದಸ್ಯರಾದ ಶೈಲಾ ಪೈ, ಮಹಮ್ಮದ್ ರಿಯಾಝ್, ಮಾಜಿ ಸದಸ್ಯ ಮುಖೇಶ್ ಕೆಮ್ಮಿಂಜೆ, ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆಯ ತಾಲ್ಲೂಕು ಸಂಚಾಲಕ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ, ಕಾಂಗ್ರೆಸ್ ಮುಖಂಡರಾದ ಶಿವರಾಮ ಆಳ್ವ, ವಕೀಲೆ ಸಾಹಿರಾ ಝುಬೈರ್, ಪೂರ್ಣೇಶ್ ಕುಮಾರ್ ಇದ್ದರು.