ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 17,883 ಲಘು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿದ್ದು, ಕೆಎಸ್ಎಫ್ಸಿಯ ಪ್ರಾದೇಶಿಕ ಕಚೇರಿಯನ್ನು ನಗರದಲ್ಲಿ ಸ್ಥಾಪಿಸುವುದರಿಂದ ಈ ಭಾಗದ ಕೈಗಾರಿಕೆಗಳ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗಲಿದೆ. ಇಲ್ಲದೇ ಇದ್ದರೆ, ಇಲ್ಲಿನ ಉದ್ಯಮಿಗಳು ಹಾಸನಕ್ಕೆ ಹೋಗುವ ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ.