ಮಂಗಳೂರು ಬಂದರು ಸೇರಿದಂತೆ ಕರಾವಳಿ ಜಿಲ್ಲೆಗಳ ವಾಣಿಜ್ಯ ವ್ಯವಹಾರದ ವಾಹನ ಸಂಚಾರಕ್ಕೆ ಶಿರಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ–75ರ ಸಂಪರ್ಕ ಅತ್ಯಗತ್ಯವಾಗಿದ್ದು, ಹೆದ್ದಾರಿ ದುರಸ್ತಿ ಆಗದದಿದ್ದರೆ, ವಾಣಿಜ್ಯ ವ್ಯವಹಾರಗಳ ಮೇಲೆ ದುಷ್ಪರಿಣಾಮ ಬೀರಲಿದೆ. ಈ ಎಲ್ಲ ಕಾರಣದಿಂದ ಈ ರಸ್ತೆಯನ್ನು ಸರಕು ವಾಹನಗಳಿಗೆ ಮಳೆಗಾಲದಲ್ಲೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ದುರಸ್ತಿ ಮಾಡಿಸಬೇಕೆಂದು ಹಾಸನ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಪ್ರದೇಶದ ಶಾಸಕರು, ಸಂಸದರಿಗೂ ಕ್ರಮಕ್ಕಾಗಿ ಶಶಿಧರ ಮಾರೂರು ಒತ್ತಾಯಿಸಿದ್ದಾರೆ.