<p><strong>ಮಂಗಳೂರು:</strong> ಪಚ್ಚನಾಡಿಯ ಘನತ್ಯಾಜ್ಯ ಶೇಖರಣಾ ಪ್ರದೇಶದಿಂದ ಹರಿಯುವ ಕೊಳಚೆ ನೀರು ಫಲ್ಗುಣಿ ನದಿಗೆ ಸೇರಿ ಕಲುಷಿತಗೊಳ್ಳುವುದನ್ನು ತಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆ ಸದಸ್ಯ ಎ.ಸಿ. ವಿನಯ್ರಾಜ್ ಎಚ್ಚರಿಕೆ ನೀಡಿದ್ದಾರೆ.</p>.<p>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಕ್ಕೆ ಸಂಗ್ರಹವಾಗುವ 250-300 ಟನ್ಗಳಷ್ಟು ತ್ಯಾಜ್ಯವನ್ನು ಪಚ್ಚನಾಡಿ ಡಂಪಿಂಗ್ ಯಾರ್ಡ್ನಲ್ಲಿ ಸುರಿಯಲಾಗುತ್ತಿದೆ. ಈ ಪ್ರದೇಶದಲ್ಲಿ ಕಸದ ಕೃತಕ ಗುಡ್ಡ ನಿರ್ಮಾಣವಾಗುತ್ತಿದೆ. ಈ ತ್ಯಾಜ್ಯದಿಂದ ಗೊಬ್ಬರ ಅಥವಾ ಇಂಧನ ಉತ್ಪಾದಿಸುವ ಬಗ್ಗೆ ಪಾಲಿಕೆ ಯೋಚಿಸಿಲ್ಲ. ಕೆಪಿಟಿಸಿಎಲ್ ₹ 150 ಕೋಟಿ ವೆಚ್ಚದಲ್ಲಿ ಪ್ರಸ್ತಾಪಿಸಿದ್ದ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನೂ ಕಡೆಗಣಿಸಲಾಗಿದೆ ಎಂದುಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>ಈ ಕಸದ ರಾಶಿಯಿಂದ ಕಲುಷಿತ ನೀರು, ಹತ್ತಿರದಲ್ಲಿಯೇ ಹರಿಯುವ ಫಲ್ಗುಣಿ ನದಿಗೆ ಸೇರಿ, ಮರವೂರು ಕುಡಿಯುವ ನೀರಿನ ಕಿಂಡಿ ಅಣೆಕಟ್ಟೆಯ ನೀರು ಮಲಿನಗೊಳ್ಳುತ್ತಿದೆ. ಇದನ್ನು ಕುಡಿಯುವ 15–20 ಗ್ರಾಮಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪಚ್ಚನಾಡಿಯ ಘನತ್ಯಾಜ್ಯ ಶೇಖರಣಾ ಪ್ರದೇಶದಿಂದ ಹರಿಯುವ ಕೊಳಚೆ ನೀರು ಫಲ್ಗುಣಿ ನದಿಗೆ ಸೇರಿ ಕಲುಷಿತಗೊಳ್ಳುವುದನ್ನು ತಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆ ಸದಸ್ಯ ಎ.ಸಿ. ವಿನಯ್ರಾಜ್ ಎಚ್ಚರಿಕೆ ನೀಡಿದ್ದಾರೆ.</p>.<p>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಕ್ಕೆ ಸಂಗ್ರಹವಾಗುವ 250-300 ಟನ್ಗಳಷ್ಟು ತ್ಯಾಜ್ಯವನ್ನು ಪಚ್ಚನಾಡಿ ಡಂಪಿಂಗ್ ಯಾರ್ಡ್ನಲ್ಲಿ ಸುರಿಯಲಾಗುತ್ತಿದೆ. ಈ ಪ್ರದೇಶದಲ್ಲಿ ಕಸದ ಕೃತಕ ಗುಡ್ಡ ನಿರ್ಮಾಣವಾಗುತ್ತಿದೆ. ಈ ತ್ಯಾಜ್ಯದಿಂದ ಗೊಬ್ಬರ ಅಥವಾ ಇಂಧನ ಉತ್ಪಾದಿಸುವ ಬಗ್ಗೆ ಪಾಲಿಕೆ ಯೋಚಿಸಿಲ್ಲ. ಕೆಪಿಟಿಸಿಎಲ್ ₹ 150 ಕೋಟಿ ವೆಚ್ಚದಲ್ಲಿ ಪ್ರಸ್ತಾಪಿಸಿದ್ದ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನೂ ಕಡೆಗಣಿಸಲಾಗಿದೆ ಎಂದುಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>ಈ ಕಸದ ರಾಶಿಯಿಂದ ಕಲುಷಿತ ನೀರು, ಹತ್ತಿರದಲ್ಲಿಯೇ ಹರಿಯುವ ಫಲ್ಗುಣಿ ನದಿಗೆ ಸೇರಿ, ಮರವೂರು ಕುಡಿಯುವ ನೀರಿನ ಕಿಂಡಿ ಅಣೆಕಟ್ಟೆಯ ನೀರು ಮಲಿನಗೊಳ್ಳುತ್ತಿದೆ. ಇದನ್ನು ಕುಡಿಯುವ 15–20 ಗ್ರಾಮಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>