<p><strong>ಮಂಗಳೂರು:</strong> ಕೋವಿಡ್–19 ಎರಡನೇ ಅಲೆಯ ಆತಂಕವನ್ನು ದೂರ ಮಾಡುವ ನಿಟ್ಟಿನಲ್ಲಿ ನಗರದ ಉರ್ವ ಪೊಲೀಸ್ ಠಾಣೆ ವಿನೂತನ ರೀತಿಯಲ್ಲಿ ಸಿದ್ಧವಾಗಿದೆ.</p>.<p>ಕೋವಿಡ್ ಪ್ರಥಮ ಅಲೆಯ ಸಂದರ್ಭದಲ್ಲಿ ಪೊಲೀಸರಿಗೂ ಕೋವಿಡ್–19 ದೃಢವಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗಳಲ್ಲೂ ಜಾಗೃತಿ ಕಾರ್ಯ ನಡೆಯುತ್ತಿದ್ದು, ನಗರದ ಉರ್ವ ಪೊಲೀಸ್ ಠಾಣೆಯೂ ಕೋವಿಡ್–19 ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಿಬ್ಬಂದಿಗಳ ಆರೋಗ್ಯದತ್ತ ಹೆಚ್ಚಿನ ನಿಗಾ ವಹಿಸಿದೆ.</p>.<p>ಕೋವಿಡ್–19 ಜಾಗೃತಿಯ ಭಾಗವಾಗಿ ಠಾಣೆಯ ಮುಂಭಾಗ ಪ್ರತ್ಯೇಕ ಕೇಂದ್ರವನ್ನು ತೆರೆಯಲಾಗಿದ್ದು, ಠಾಣೆಗೆ ಬರುವ ಪ್ರತಿಯೊಬ್ಬ ಸಿಬ್ಬಂದಿ, ನಾಗರಿಕರು ಈ ಕೇಂದ್ರಕ್ಕೆ ಬಂದು ತಪಾಸಣೆ ಮಾಡಿಯೇ ಠಾಣೆಯ ಒಳಗೆ ತೆರಳುವಂತೆ ವ್ಯವಸ್ಥೆ ಮಾಡಲಾಗಿದೆ.</p>.<p class="Subhead"><strong>ಠಾಣೆಯಲ್ಲಿ ಕಷಾಯ: </strong>ಆರೋಗ್ಯದ ಹಿತದೃಷ್ಟಿಯಿಂದ ಉರ್ವ ಪೊಲೀಸ್ ಠಾಣೆಯಲ್ಲಿ ಕಷಾಯವೂ ಲಭ್ಯವಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯವನ್ನು ಇಲ್ಲಿ ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತದೆ. ಸಮಸ್ಯೆ ಹೇಳಿಕೊಂಡು ಠಾಣೆಗೆ ಬರುವ ಸಾರ್ವಜನಿಕರೂ ಕಷಾಯ ಬಯಸಿದರೆ ನೀಡುವ ವ್ಯವಸ್ಥೆ ಮಾಡಲಾಗಿದೆ.</p>.<p>ಕಳೆದ ಬಾರಿ ಹಲವು ಮಂದಿ ಪೊಲೀಸರಿಗೆ ಕೋವಿಡ್–19 ತಗುಲಿತ್ತು. ಕೊರೊನಾ ವಾರಿಯರ್ಗಳಾಗಿ ಕೆಲಸ ಮಾಡುತ್ತಿರುವ ಪೊಲೀಸರ ಆರೋಗ್ಯದ ಹಿತದೃಷ್ಟಿಯಿಂದ ಈ ಮಾದರಿ ಕೇಂದ್ರವನ್ನು ತೆರೆಯಲಾಗಿದೆ. ಪ್ರತಿಯೊಬ್ಬರೂ ಕೋವಿಡ್ ಕುರಿತು ಎಚ್ಚರಿಕೆ ವಹಿಸಬೇಕಾದ್ದು, ಅತ್ಯವಶ್ಯಕ. ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸುರಕ್ಷಿತ ಅಂತರ ಕಾಯ್ದು<br />ಕೊಳ್ಳಬೇಕು. ಅನವಶ್ಯಕವಾಗಿ ಯಾರೂ ತಿರುಗಾಡಬಾರದು. ಕೋವಿಡ್–19 ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.</p>.<p><strong>‘ಸುರಕ್ಷತೆಗೆ ಕ್ರಮ’</strong><br />ಠಾಣೆಗೆ ದೂರು ನೀಡಲು ಬರುವ ಸಾರ್ವಜನಿಕರನ್ನು ಇಲ್ಲಿ ಕೂರಿಸಲಾಗುತ್ತದೆ. ಅವರಿಂದ ಮಾಹಿತಿ ಪಡೆಯಲಾಗುತ್ತದೆ. ನಂತರ ಲಿಖಿತ<br />ದೂರನ್ನು ಪೆಟ್ಟಿಗೆಯ ಹಾಕುವ ಮೂಲಕ ಸ್ಯಾನಿಟೈಸ್ ಮಾಡಲಾಗುತ್ತದೆ. ಅದಾದ ಮೇಲೆ ಅರ್ಜಿಯನ್ನು ಪಡೆದು, ದೂರು ದಾಖಲಿಸಲಾಗುತ್ತದೆ ಎಂದು ಎನ್. ಶಶಿಕುಮಾರ್ ತಿಳಿಸಿದರು.</p>.<p>ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚಿಸಲು ಬಯಸುವ ಸಾರ್ವಜನಿಕರನ್ನು ಇಲ್ಲಿ ತಪಾಸಣೆ ಮಾಡಲಾಗುತ್ತದೆ. ಕೈಗಳಿಗೆ ಸ್ಯಾನಿಟೈಸರ್ ಹಾಕಿದ ನಂತರ ಠಾಣೆಯ ಒಳಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದರು.</p>.<p>ಆರೋಪಿಗಳನ್ನು ಬಂಧಿಸಿದ ಸಂದರ್ಭದಲ್ಲೂ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ. ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಿದ ಬಳಿಕವೇ ಆರೋಪಿಯನ್ನು ಠಾಣೆಗೆ ಕರೆತರಲಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೋವಿಡ್–19 ಎರಡನೇ ಅಲೆಯ ಆತಂಕವನ್ನು ದೂರ ಮಾಡುವ ನಿಟ್ಟಿನಲ್ಲಿ ನಗರದ ಉರ್ವ ಪೊಲೀಸ್ ಠಾಣೆ ವಿನೂತನ ರೀತಿಯಲ್ಲಿ ಸಿದ್ಧವಾಗಿದೆ.</p>.<p>ಕೋವಿಡ್ ಪ್ರಥಮ ಅಲೆಯ ಸಂದರ್ಭದಲ್ಲಿ ಪೊಲೀಸರಿಗೂ ಕೋವಿಡ್–19 ದೃಢವಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗಳಲ್ಲೂ ಜಾಗೃತಿ ಕಾರ್ಯ ನಡೆಯುತ್ತಿದ್ದು, ನಗರದ ಉರ್ವ ಪೊಲೀಸ್ ಠಾಣೆಯೂ ಕೋವಿಡ್–19 ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಿಬ್ಬಂದಿಗಳ ಆರೋಗ್ಯದತ್ತ ಹೆಚ್ಚಿನ ನಿಗಾ ವಹಿಸಿದೆ.</p>.<p>ಕೋವಿಡ್–19 ಜಾಗೃತಿಯ ಭಾಗವಾಗಿ ಠಾಣೆಯ ಮುಂಭಾಗ ಪ್ರತ್ಯೇಕ ಕೇಂದ್ರವನ್ನು ತೆರೆಯಲಾಗಿದ್ದು, ಠಾಣೆಗೆ ಬರುವ ಪ್ರತಿಯೊಬ್ಬ ಸಿಬ್ಬಂದಿ, ನಾಗರಿಕರು ಈ ಕೇಂದ್ರಕ್ಕೆ ಬಂದು ತಪಾಸಣೆ ಮಾಡಿಯೇ ಠಾಣೆಯ ಒಳಗೆ ತೆರಳುವಂತೆ ವ್ಯವಸ್ಥೆ ಮಾಡಲಾಗಿದೆ.</p>.<p class="Subhead"><strong>ಠಾಣೆಯಲ್ಲಿ ಕಷಾಯ: </strong>ಆರೋಗ್ಯದ ಹಿತದೃಷ್ಟಿಯಿಂದ ಉರ್ವ ಪೊಲೀಸ್ ಠಾಣೆಯಲ್ಲಿ ಕಷಾಯವೂ ಲಭ್ಯವಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯವನ್ನು ಇಲ್ಲಿ ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತದೆ. ಸಮಸ್ಯೆ ಹೇಳಿಕೊಂಡು ಠಾಣೆಗೆ ಬರುವ ಸಾರ್ವಜನಿಕರೂ ಕಷಾಯ ಬಯಸಿದರೆ ನೀಡುವ ವ್ಯವಸ್ಥೆ ಮಾಡಲಾಗಿದೆ.</p>.<p>ಕಳೆದ ಬಾರಿ ಹಲವು ಮಂದಿ ಪೊಲೀಸರಿಗೆ ಕೋವಿಡ್–19 ತಗುಲಿತ್ತು. ಕೊರೊನಾ ವಾರಿಯರ್ಗಳಾಗಿ ಕೆಲಸ ಮಾಡುತ್ತಿರುವ ಪೊಲೀಸರ ಆರೋಗ್ಯದ ಹಿತದೃಷ್ಟಿಯಿಂದ ಈ ಮಾದರಿ ಕೇಂದ್ರವನ್ನು ತೆರೆಯಲಾಗಿದೆ. ಪ್ರತಿಯೊಬ್ಬರೂ ಕೋವಿಡ್ ಕುರಿತು ಎಚ್ಚರಿಕೆ ವಹಿಸಬೇಕಾದ್ದು, ಅತ್ಯವಶ್ಯಕ. ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸುರಕ್ಷಿತ ಅಂತರ ಕಾಯ್ದು<br />ಕೊಳ್ಳಬೇಕು. ಅನವಶ್ಯಕವಾಗಿ ಯಾರೂ ತಿರುಗಾಡಬಾರದು. ಕೋವಿಡ್–19 ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.</p>.<p><strong>‘ಸುರಕ್ಷತೆಗೆ ಕ್ರಮ’</strong><br />ಠಾಣೆಗೆ ದೂರು ನೀಡಲು ಬರುವ ಸಾರ್ವಜನಿಕರನ್ನು ಇಲ್ಲಿ ಕೂರಿಸಲಾಗುತ್ತದೆ. ಅವರಿಂದ ಮಾಹಿತಿ ಪಡೆಯಲಾಗುತ್ತದೆ. ನಂತರ ಲಿಖಿತ<br />ದೂರನ್ನು ಪೆಟ್ಟಿಗೆಯ ಹಾಕುವ ಮೂಲಕ ಸ್ಯಾನಿಟೈಸ್ ಮಾಡಲಾಗುತ್ತದೆ. ಅದಾದ ಮೇಲೆ ಅರ್ಜಿಯನ್ನು ಪಡೆದು, ದೂರು ದಾಖಲಿಸಲಾಗುತ್ತದೆ ಎಂದು ಎನ್. ಶಶಿಕುಮಾರ್ ತಿಳಿಸಿದರು.</p>.<p>ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚಿಸಲು ಬಯಸುವ ಸಾರ್ವಜನಿಕರನ್ನು ಇಲ್ಲಿ ತಪಾಸಣೆ ಮಾಡಲಾಗುತ್ತದೆ. ಕೈಗಳಿಗೆ ಸ್ಯಾನಿಟೈಸರ್ ಹಾಕಿದ ನಂತರ ಠಾಣೆಯ ಒಳಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದರು.</p>.<p>ಆರೋಪಿಗಳನ್ನು ಬಂಧಿಸಿದ ಸಂದರ್ಭದಲ್ಲೂ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ. ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಿದ ಬಳಿಕವೇ ಆರೋಪಿಯನ್ನು ಠಾಣೆಗೆ ಕರೆತರಲಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>