ಮಂಗಳೂರು: ಧಾರಾಕಾರ ಮಳೆಯಿಂದಾಗಿ ಹಾನಿಗೆ ಒಳಗಾಗಿರುವ ಹರೇಕಳ- ಅಡ್ಯಾರ್ ಅಣೆಕಟ್ಟೆ ಕಾಮಗಾರಿ ಸ್ಥಳಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲಿಸಿದರು.
ಮಳೆಯಿಂದ ಕೋಟ್ಯಂತರ ನಷ್ಟ ಉಂಟಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.
ಎಎಂಆರ್ ಪವರ್ ಜನರೇಷನ್ನವರು ಮಾಹಿತಿಯಿಲ್ಲದೆ ನೀರು ಬಿಟ್ಟಿರುವುದೇ ಘಟನೆಗೆ ಕಾರಣ. ಜಿಲ್ಲಾಡಳಿತದಿಂದ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದರು.