<p><strong>ಮಂಗಳೂರು:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಡಿಯೊ ನಕಲಿಯೇ, ಅಸಲಿಯೇ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು. ಯಡಿಯೂರಪ್ಪ ಮುಂದುವರಿಯುತ್ತಾರೊ ಇಲ್ಲವೋ ಎಂಬುದನ್ನು ನಳಿನ್ಕುಮಾರ್ ಕಟೀಲ್ ತಿಳಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಜಗಳ ನಡೆಯುತ್ತಿಲ್ಲ. ಬಿಜೆಪಿ ಸರ್ಕಾರ ವಿಫಲವಾಗಿದ್ದು, ಸಹಜವಾಗಿ ಜನರು ಕಾಂಗ್ರೆಸ್ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳ ರಾಜಕೀಯ ಇಲ್ಲ ಎಂದು ತಿಳಿಸಿದರು.</p>.<p>ಉಳ್ಳಾಲ, ಸೋಮೇಶ್ವರ್ ಬೀಚ್ ರಸ್ತೆಗಳು ಸಮುದ್ರ ಪಾಲಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.</p>.<p>ಕೋವಿಡ್ ತಡೆ ಉಚಿತ ಲಸಿಕೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ. ಆದರೆ ವಾರಕ್ಕೆ 50 ಸಾವಿರ ಡೋಸ್ ಮಾತ್ರ ಸರಬರಾಜಾಗುತ್ತಿದೆ ಎಂದು ಟೀಕಿಸಿದರು.</p>.<p>ಡಿಸಿಸಿ ಅಧ್ಯಕ್ಷ, ಶಾಸಕ ಹರೀಶ್ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ ಇದ್ದರು.</p>.<p class="Briefhead"><strong>‘ಸಾವಿನ ಸಂಖ್ಯೆ ಮರೆಮಾಚಿದ ಸರ್ಕಾರ’</strong>: ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಧನ ನೀಡುವುದರಿಂದ ತಪ್ಪಿಸಿಕೊಳ್ಳಲು ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ ಸಾವಿನ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 3 ಲಕ್ಷಕ್ಕಿಂತ ಹೆಚ್ಚು ಮಂದಿ ಕೋವಿಡ್ ಕಾರಣಕ್ಕಾಗಿ ಮೃತಪಟ್ಟಿದ್ದಾರೆ. ಆದರೆ ಸರ್ಕಾರ 30 ಸಾವಿರ ಎಂದು ಹೇಳುತ್ತಿದೆ. ಪರಿಹಾರ ಘೋಷಣೆ ಮಾಡಿರುವುದು ತಲಾ ₹1 ಲಕ್ಷ ಮಾತ್ರ. ಕನಿಷ್ಠ ₹ 5ಲಕ್ಷ ಪರಿಹಾರ ಕೊಡಬೇಕು ಎಂದರು.</p>.<p>ಭಿನ್ನಮತೀಯ ಚಟುವಟಿಕೆಯಿಂದ ಸಚಿವರು ಕೆಲಸ ಮಾಡುತ್ತಿಲ್ಲ. ಜನರ ಸಂಕಷ್ಟಗಳಿಗ ಸ್ಪಂದಿಸುವವರು ಇಲ್ಲ ಎಂದರು.</p>.<p><a href="https://www.prajavani.net/world-news/wild-pigs-boar-one-of-the-most-damaging-invasive-species-on-earth-here-is-the-reason-849906.html" itemprop="url">ಕಾಡು ಹಂದಿಗಳಿಂದ ಪರಿಸರ ಮಾಲಿನ್ಯ: 10 ಲಕ್ಷ ಕಾರು ಉಗುಳುವ ಹೊಗೆಗೆ ಸಮ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಡಿಯೊ ನಕಲಿಯೇ, ಅಸಲಿಯೇ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು. ಯಡಿಯೂರಪ್ಪ ಮುಂದುವರಿಯುತ್ತಾರೊ ಇಲ್ಲವೋ ಎಂಬುದನ್ನು ನಳಿನ್ಕುಮಾರ್ ಕಟೀಲ್ ತಿಳಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಜಗಳ ನಡೆಯುತ್ತಿಲ್ಲ. ಬಿಜೆಪಿ ಸರ್ಕಾರ ವಿಫಲವಾಗಿದ್ದು, ಸಹಜವಾಗಿ ಜನರು ಕಾಂಗ್ರೆಸ್ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳ ರಾಜಕೀಯ ಇಲ್ಲ ಎಂದು ತಿಳಿಸಿದರು.</p>.<p>ಉಳ್ಳಾಲ, ಸೋಮೇಶ್ವರ್ ಬೀಚ್ ರಸ್ತೆಗಳು ಸಮುದ್ರ ಪಾಲಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.</p>.<p>ಕೋವಿಡ್ ತಡೆ ಉಚಿತ ಲಸಿಕೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ. ಆದರೆ ವಾರಕ್ಕೆ 50 ಸಾವಿರ ಡೋಸ್ ಮಾತ್ರ ಸರಬರಾಜಾಗುತ್ತಿದೆ ಎಂದು ಟೀಕಿಸಿದರು.</p>.<p>ಡಿಸಿಸಿ ಅಧ್ಯಕ್ಷ, ಶಾಸಕ ಹರೀಶ್ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ ಇದ್ದರು.</p>.<p class="Briefhead"><strong>‘ಸಾವಿನ ಸಂಖ್ಯೆ ಮರೆಮಾಚಿದ ಸರ್ಕಾರ’</strong>: ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಧನ ನೀಡುವುದರಿಂದ ತಪ್ಪಿಸಿಕೊಳ್ಳಲು ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ ಸಾವಿನ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 3 ಲಕ್ಷಕ್ಕಿಂತ ಹೆಚ್ಚು ಮಂದಿ ಕೋವಿಡ್ ಕಾರಣಕ್ಕಾಗಿ ಮೃತಪಟ್ಟಿದ್ದಾರೆ. ಆದರೆ ಸರ್ಕಾರ 30 ಸಾವಿರ ಎಂದು ಹೇಳುತ್ತಿದೆ. ಪರಿಹಾರ ಘೋಷಣೆ ಮಾಡಿರುವುದು ತಲಾ ₹1 ಲಕ್ಷ ಮಾತ್ರ. ಕನಿಷ್ಠ ₹ 5ಲಕ್ಷ ಪರಿಹಾರ ಕೊಡಬೇಕು ಎಂದರು.</p>.<p>ಭಿನ್ನಮತೀಯ ಚಟುವಟಿಕೆಯಿಂದ ಸಚಿವರು ಕೆಲಸ ಮಾಡುತ್ತಿಲ್ಲ. ಜನರ ಸಂಕಷ್ಟಗಳಿಗ ಸ್ಪಂದಿಸುವವರು ಇಲ್ಲ ಎಂದರು.</p>.<p><a href="https://www.prajavani.net/world-news/wild-pigs-boar-one-of-the-most-damaging-invasive-species-on-earth-here-is-the-reason-849906.html" itemprop="url">ಕಾಡು ಹಂದಿಗಳಿಂದ ಪರಿಸರ ಮಾಲಿನ್ಯ: 10 ಲಕ್ಷ ಕಾರು ಉಗುಳುವ ಹೊಗೆಗೆ ಸಮ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>