ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಅಹಿತಕರ ಘಟನೆಗಳು ಹೆಚ್ಚುತ್ತಿದೆ ಪೊಲೀಸರ ಮೇಲೆ ರಾಜಕೀಯ ಒತ್ತಡ ಹೆಚ್ಚುತ್ತಿದೆ. ಇದರಿಂದಾಗಿ ಸಮಾಜಘಾತುಕ ಶಕ್ತಿಗಳು ಸಮಾಜದ ಶಾಂತಿ ಭಂಗ ಉಂಟುಮಾಡುವ ಹೇಳಿಕೆಯನ್ನು ಬಹಿರಂಗವಾಗಿ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರಕಾರದ ಗೃಹ ಸಚಿವರು ಜಿಲ್ಲಾಮಟ್ಟದಲ್ಲಿ ತುರ್ತು ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಬೇಕು ಅಥವಾ ಈ ಬಗ್ಗೆ ವಿಧಾನಸಭೆಯಲ್ಲಿ ನನಗೆ ವಿಷಯ ಮಂಡಿಸಲು ಅವಕಾಶ ನೀಡಬೇಕು ಎಂದು ಖಾದರ್ ತಿಳಿಸಿದರು.