‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವ್ಯವಸ್ಥಿತವಾಗಿ ಹಿಂಸಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ರಾಜ್ಯದ ಪೊಲೀಸ್ ಸಿಬ್ಬಂದಿಯ ಮೇಲೆ ವಿಶ್ವಾಸವಿಲ್ಲದೆ, ಪಕ್ಷದ ಬೆಂಬಲಿಗರಾದ ಕಿಡಿಗೇಡಿಗಳನ್ನು ಈ ಕೆಲಸಕ್ಕೆ ಅವರು ಅಣಿಗೊಳಿಸಿದ್ದಾರೆ’ ಎಂದು ಅವರು ಜಿಲ್ಲಾ ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಟೀಕಿಸಿದರು.