ಪ್ರಧಾನಿ ನರೇಂದ್ರ ಮೊದಿ ಅವರು ಮಂಗಳೂರು– ಮಡಗಾಂವ್ ವಂದೇ ಭಾರತ್ ರೈಲಿಗೆ ಇದೇ 30ರಂದು ಹಸಿರು ನಿಶಾನೆ ತೋರಿಸಲಿದ್ದಾರೆ. ಅದೇ ದಿನ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ನೂತನ 4 ಮತ್ತು 5ನೇ ಪ್ಲ್ಯಾಟ್ಫಾರ್ಮ್ಗಳ ಉದ್ಘಾಟನೆಯನ್ನೂ ನೆರವೇರಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.