<p><strong>ಮೂಡುಬಿದಿರೆ:</strong> ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ದೇಶವಾಗಿದ್ದು, ಈ ಯುವಶಕ್ತಿ ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕು ಕೇಂದ್ರ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯಿಲಿ ಹೇಳಿದರು.</p>.<p>ಕಲ್ಲಬೆಟ್ಟು ನ್ಯೂ ವೈಬ್ರೆಂಟ್ ಪಿಯು ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ವೈಬ್ರೆಂಟ್ ಡೇ 2025’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭವಿಷ್ಯದಲ್ಲಿ ರಾಷ್ಟ್ರ ನಿರ್ಮಿಸುವ ಇಂದಿನ ಯುವಜನಾಂಗ ಕಲಿಕೆಯ ಹಂತದಲ್ಲೇ ಇಚ್ಛಾಶಕ್ತಿ, ಧೈರ್ಯ, ಪರಿಶ್ರಮ ಪಡಬೇಕು. ಯುವಶಕ್ತಿ ದೇಶದ ಸಂಪತ್ತಾಗಿ ಪರಿವರ್ತನೆಯಾದಾಗ ಸಂಪದ್ಭರಿತ ದೇಶ ನಿರ್ಮಾಣ ಸಾಧ್ಯ. ಹಣದ ಬೆನ್ನು ಹತ್ತದೆ ಸಂತೃಪ್ತ ಜೀವನಕ್ಕೆ ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಅಮರೇಶ್ ಅತಿಥಿಗಳಾಗಿ ಭಾಗವಹಿಸಿದ್ದರು.</p>.<p>ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ಎನ್ಐಟಿಕೆಯ ಪ್ರಾಧ್ಯಾಪಕ ಎಂ.ಎನ್.ಸತ್ಯನಾರಾಯಣ ಅವರಿಗೆ ವೈಬ್ರೆಂಟ್ ವಿಜ್ಞಾನ ರತ್ನ <br> ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಸಂಸ್ಥೆಯ ಟ್ರಸ್ಟಿ ಷೇಕ್ ಮಹಬೂಬ್ ಭಾಷಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಎಸ್.ಎಸ್.ವೆಂಕಟೇಶ ನಾಯಕ್ ಶೈಕ್ಷಣಿಕ ಸಾಧನೆಗಳ ಕುರಿತು ಮಾಹಿತಿ ನೀಡಿದರು.</p>.<p>ಟ್ರಸ್ಟಿಗಳಾದ ಚಂದ್ರರಾಜೇ ಅರಸ್, ಯೋಗೀಶ್ ಬೆಡೇಕರ್, ಸುಭಾಷ್ ಕೆ.ಝಾ, ಶರತ್ ಗೋರೆ ಭಾಗವಹಿಸಿದ್ದರು. ಆಡಳಿತಾಧಿಕಾರಿ ಅರುಣ್ ಡಿಸಿಲ್ವ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರಶ್ಮಿ ಅರಸ್ ವಂದಿಸಿದರು. ಉಪನ್ಯಾಸಕ ನಿಕೇತ್ ಮೋಹನದಾಸ ಶೆಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ದೇಶವಾಗಿದ್ದು, ಈ ಯುವಶಕ್ತಿ ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕು ಕೇಂದ್ರ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯಿಲಿ ಹೇಳಿದರು.</p>.<p>ಕಲ್ಲಬೆಟ್ಟು ನ್ಯೂ ವೈಬ್ರೆಂಟ್ ಪಿಯು ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ವೈಬ್ರೆಂಟ್ ಡೇ 2025’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭವಿಷ್ಯದಲ್ಲಿ ರಾಷ್ಟ್ರ ನಿರ್ಮಿಸುವ ಇಂದಿನ ಯುವಜನಾಂಗ ಕಲಿಕೆಯ ಹಂತದಲ್ಲೇ ಇಚ್ಛಾಶಕ್ತಿ, ಧೈರ್ಯ, ಪರಿಶ್ರಮ ಪಡಬೇಕು. ಯುವಶಕ್ತಿ ದೇಶದ ಸಂಪತ್ತಾಗಿ ಪರಿವರ್ತನೆಯಾದಾಗ ಸಂಪದ್ಭರಿತ ದೇಶ ನಿರ್ಮಾಣ ಸಾಧ್ಯ. ಹಣದ ಬೆನ್ನು ಹತ್ತದೆ ಸಂತೃಪ್ತ ಜೀವನಕ್ಕೆ ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಅಮರೇಶ್ ಅತಿಥಿಗಳಾಗಿ ಭಾಗವಹಿಸಿದ್ದರು.</p>.<p>ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ಎನ್ಐಟಿಕೆಯ ಪ್ರಾಧ್ಯಾಪಕ ಎಂ.ಎನ್.ಸತ್ಯನಾರಾಯಣ ಅವರಿಗೆ ವೈಬ್ರೆಂಟ್ ವಿಜ್ಞಾನ ರತ್ನ <br> ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಸಂಸ್ಥೆಯ ಟ್ರಸ್ಟಿ ಷೇಕ್ ಮಹಬೂಬ್ ಭಾಷಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಎಸ್.ಎಸ್.ವೆಂಕಟೇಶ ನಾಯಕ್ ಶೈಕ್ಷಣಿಕ ಸಾಧನೆಗಳ ಕುರಿತು ಮಾಹಿತಿ ನೀಡಿದರು.</p>.<p>ಟ್ರಸ್ಟಿಗಳಾದ ಚಂದ್ರರಾಜೇ ಅರಸ್, ಯೋಗೀಶ್ ಬೆಡೇಕರ್, ಸುಭಾಷ್ ಕೆ.ಝಾ, ಶರತ್ ಗೋರೆ ಭಾಗವಹಿಸಿದ್ದರು. ಆಡಳಿತಾಧಿಕಾರಿ ಅರುಣ್ ಡಿಸಿಲ್ವ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರಶ್ಮಿ ಅರಸ್ ವಂದಿಸಿದರು. ಉಪನ್ಯಾಸಕ ನಿಕೇತ್ ಮೋಹನದಾಸ ಶೆಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>