<p><strong>ಉಜಿರೆ:</strong> ದಶಲಕ್ಷಣ ಪರ್ವವು ಸರ್ವ ಪರ್ವಗಳ ರಾಜನಾಗಿದ್ದು, ದಶಧರ್ಮಗಳ ಪಾಲನೆಯಿಂದ ಮುನಿಯಾಗುವ ಯೋಗ, ಭಾಗ್ಯ ಪ್ರಾಪ್ತಿಯಾಗುತ್ತದೆ ಎಂದು ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.</p>.<p>ವೇಣೂರು ಬಾಹುಬಲಿ ಕ್ಷೇತ್ರದ ಯಾತ್ರಿನಿವಾಸದಲ್ಲಿ ಕ್ಷಮಾವಳಿಯೊಂದಿಗೆ ದಶಲಕ್ಷಣ ಪರ್ವದ ಸಮಾರೋಪದಲ್ಲಿ ಮಂಗಲಪ್ರವಚನ ನೀಡಿದರು.</p>.<p>ದಶಧರ್ಮಗಳು ಮನಸ್ಸನ್ನು ಸುಂದರಗೊಳಿಸಿ ವಿವೇಕ ಪ್ರಾಪ್ತಿಗೆ ಪ್ರೇರಕವಾಗಿವೆ. ಅನುಕಂಪ ಮತ್ತು ಕರುಣೆಯೊಂದಿಗೆ ಅಹಿಂಸೆಯ ಪಾಲನೆ ಮಾಡಿದಾಗ ಕ್ಷಮಾ ಗುಣವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಬದಕಿನ ಸವಾಲುಗಳನ್ನು ಕ್ಷಮಾಗುಣದೊಂದಿಗೆ ತಾಳ್ಮೆ ಮತ್ತು ಸಂಯಮದಿಂದ ಸುಲಭದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.</p>.<p>ಮೂಡುಬಿದಿರೆ ಜೈನ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಭಾತ್ ಬಲ್ನಾಡ್ ಧಾರ್ಮಿಕ ಉಪನ್ಯಾಸ ನೀಡಿದರು. ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಅಶ್ವಿನಿಪ್ರವೀಣ್ ಕುಮಾರ್ ಇಂದ್ರ ವಂದಿಸಿದರು.</p>.<p>ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು. ಡಾ.ವರ್ಷಾ ಮತ್ತು ಸತ್ಯಪ್ರಸಾದ್ ವಿ.ಜೈನ್ ಸಮಾರಂಭದ ಪ್ರಾಯೋಜಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ದಶಲಕ್ಷಣ ಪರ್ವವು ಸರ್ವ ಪರ್ವಗಳ ರಾಜನಾಗಿದ್ದು, ದಶಧರ್ಮಗಳ ಪಾಲನೆಯಿಂದ ಮುನಿಯಾಗುವ ಯೋಗ, ಭಾಗ್ಯ ಪ್ರಾಪ್ತಿಯಾಗುತ್ತದೆ ಎಂದು ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.</p>.<p>ವೇಣೂರು ಬಾಹುಬಲಿ ಕ್ಷೇತ್ರದ ಯಾತ್ರಿನಿವಾಸದಲ್ಲಿ ಕ್ಷಮಾವಳಿಯೊಂದಿಗೆ ದಶಲಕ್ಷಣ ಪರ್ವದ ಸಮಾರೋಪದಲ್ಲಿ ಮಂಗಲಪ್ರವಚನ ನೀಡಿದರು.</p>.<p>ದಶಧರ್ಮಗಳು ಮನಸ್ಸನ್ನು ಸುಂದರಗೊಳಿಸಿ ವಿವೇಕ ಪ್ರಾಪ್ತಿಗೆ ಪ್ರೇರಕವಾಗಿವೆ. ಅನುಕಂಪ ಮತ್ತು ಕರುಣೆಯೊಂದಿಗೆ ಅಹಿಂಸೆಯ ಪಾಲನೆ ಮಾಡಿದಾಗ ಕ್ಷಮಾ ಗುಣವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಬದಕಿನ ಸವಾಲುಗಳನ್ನು ಕ್ಷಮಾಗುಣದೊಂದಿಗೆ ತಾಳ್ಮೆ ಮತ್ತು ಸಂಯಮದಿಂದ ಸುಲಭದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.</p>.<p>ಮೂಡುಬಿದಿರೆ ಜೈನ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಭಾತ್ ಬಲ್ನಾಡ್ ಧಾರ್ಮಿಕ ಉಪನ್ಯಾಸ ನೀಡಿದರು. ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಅಶ್ವಿನಿಪ್ರವೀಣ್ ಕುಮಾರ್ ಇಂದ್ರ ವಂದಿಸಿದರು.</p>.<p>ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು. ಡಾ.ವರ್ಷಾ ಮತ್ತು ಸತ್ಯಪ್ರಸಾದ್ ವಿ.ಜೈನ್ ಸಮಾರಂಭದ ಪ್ರಾಯೋಜಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>