ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಣೂರಿನ ಬಾಹುಬಲಿ ಮೂರ್ತಿಗೆ ಇದೇ 8ರಂದು ರಜತ ಲಾಲಕಿ ಸಮರ್ಪಣೆ

Last Updated 3 ಮಾರ್ಚ್ 2020, 10:42 IST
ಅಕ್ಷರ ಗಾತ್ರ

ಉಜಿರೆ: ವೇಣೂರಿನ ಬಾಹುಬಲಿ ಬೆಟ್ಟದ ಪ್ರಾಂಗಣದಲ್ಲಿ ಇದೇ 8ರಂದು ಸಂಜೆ ಗಂಟೆ 5.30ಕ್ಕೆ ನೂತನ ರಜತ ಲಾಲಕಿ ಸಮರ್ಪಣೆ ಸಮಾರಂಭ ನಡೆಯಲಿದೆ.

ಅಳದಂಗಡಿ ಅರಮನೆ ಡಾ. ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಭಾರತೀಯ ಜೈನ್ ಮಿಲನ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಮುನಿರಾಜ ರೆಂಜಾಳ ಶುಭಾಶಂಸನೆ ಮಾಡುವರು.

ರಥಯಾತ್ರೆ: ವೇಣೂರು ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಇದೇ 6 ರಿಂದ 9ರ ವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT