ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಸಚಿವ ಖಾದರ್ ಅವರ ಅಲ್ಪಸಂಖ್ಯಾತರ ಓಲೈಕೆ ನೀತಿ ಖಂಡನೀಯ. ಕರ್ನಾಟಕದಲ್ಲಿ ಸಂಫೂರ್ಣ ಗೋಹತ್ಯೆ ನಿಷೇಧವಿದ್ದರೂ, ಕುದ್ರೋಳಿ ಕಸಾಯಿಖಾನೆಗೆ ವಾಹನದ ಮೂಲಕ ಗೋವಧೆಗಾಗಿ ಗೋ ಸಾಗಣೆ ಮಾಡಿದ ಹಲವಾರು ಪ್ರಕರಣಗಳು ದಾಖಲಾಗಿದೆ. ಸಚಿವರು ಅಕ್ರಮ ಕಸಾಯಿಖಾನೆಗೆ ಕುಮ್ಮಕ್ಕು ನೀಡುವ ಮೂಲಕ ಇಲ್ಲಿ ಕೋಮುಗಲಭೆ ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಹಿಂದೂಗಳ ಭಾವನೆ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.