<p><strong>ಮಂಗಳೂರು:</strong> ‘ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್, ನಗರದ ಕದ್ರಿ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥ ಹಾಗೂ ಮಂಗಳಾದೇವಿ ದೇವಸ್ಥಾನಗಳನ್ನು ಗುರಿಯಾಗಿಸಿ ಭಯೋತ್ಪಾದನಾ ಕೃತ್ಯ ನಡೆಸುವ ಉದ್ದೇಶ ಹೊಂದಿದ್ದುದು ಮೇಲ್ನೊಟಕ್ಕೆ ಸಾಬೀತಾಗಿದೆ. ಈ ಧಾರ್ಮಿಕ ಕೇಂದ್ರಗಳಿಗೆ ಸರ್ಕಾರ ಭದ್ರತೆ ಒದಗಿಸಬೇಕು‘ ಎಂದು ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಒತ್ತಾಯಿಸಿದರು.</p>.<p>ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ನ ಕಚೇರಿ ಸಂಘ ನಿಕೇತನಕ್ಕೂ ಬೆದರಿಕೆ ಇದ್ದು, ಇದಕ್ಕೂ ಸರ್ಕಾರ ರಕ್ಷಣೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>’ಆರೋಪಿಯು ಹಿಂದೂ ಗುರುತನ್ನು ದುರ್ಬಳಕೆ ಮಾಡಿಕೊಂಡಿದ್ದ. ಆತ ಜೀವಂತವಾಗಿ ಸಿಕ್ಕಿದ್ದರಿಂದ ಆತ ಮುಸಲ್ಮಾನ ಎಂಬ ಸತ್ಯ ಹೊರ ಜಗತ್ತಿಗೆ ಗೊತ್ತಾಗಿದೆ. ಇಲ್ಲದಿದ್ದರೆ ಕುಕ್ಕರ್ ಬಾಂಬ್ ಸ್ಫೊಟವನ್ನೂ ಹಿಂದೂಗಳ ತಲೆಗೆ ಕಟ್ಟಲಾಗುತ್ತಿತ್ತು’ ಎಂದರು. </p>.<p>’ಉಗ್ರಗಾಮಿ ಸಂಘಟನೆಗಳ ಪರವಾಗಿ ಗೋಡೆ ಬರೆಹ ಬರದ ಪ್ರಕರಣದಲ್ಲಿ ಬಂಧಿತನಾಗಿದ್ದ. ಶಾರಿಕ್ಗೆ ಜಾಮೀನು ಕೊಡಿಸಿದ್ದು ಯಾರು, ಹಣಕಾಸು ಎಲ್ಲಿಂದ ಬರುತ್ತಿತ್ತು ಎಂದು ತನಿಖೆ ನಡೆಸುವಂತೆ ಗೃಹಸಚಿವರನ್ನು ಒತ್ತಾಯಿಸಿದ್ದೇವೆ’ ಎಂದರು.</p>.<p>‘ಆಟೊರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಸಂಘಟನೆಯಿಂದ ನೆರವು ನಿಡುತ್ತೇವೆ. ಸರ್ಕಾರವೂ ಅವರಿಗೆ ಪರಿಹಾರ ನೀಡಬೇಕು‘ ಎಂದು ಒತ್ತಾಯಿಸಿದರು.</p>.<p>’ಶಾರಿಕ್ಗಿಂತ ಹಿಂದೆಯೂ ಅನೇಕ ಘಟನೆಗಳು ಕರಾವಳಿ ಜಿಲ್ಲೆಯಲ್ಲಿ ನಡೆದಿದೆ. ಕೇವಲ ಭಯೋತ್ಪಾದನೆ ಕೃತ್ಯ ಮಾತ್ರವಲ್ಲ, ಲವ್ ಜಿಹಾದ್, ಬೇನಾಮಿ ಹಣ ಬಳಸಿ ಭೂಮಿ ಖರೀದಿ, ಡ್ರಗ್ಸ್ ದಂಧೆ, ಸೆಕ್ಸ್ ಜಿಹಾದ್ ಕೂಡಾ ಜಿಲ್ಲೆಯಲ್ಲಿ ನಡೆಯುತ್ತಿದೆ’ ಎಂದರು.</p>.<p>‘ಹಿಂದೂ ದೇವಸ್ಥಾನಗಳ ಪರಿಸರದಲ್ಲಿ ಅತ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.</p>.<p>ವಿಎಚ್ಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಹರೀಶ್ ಶೇಟ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ವಿಭಾಗ ಸಂಚಾಲಕ ಭುಜಂಗ ಕುಲಾಲ್, ಬಜರಂಗ ದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್, ನಗರದ ಕದ್ರಿ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥ ಹಾಗೂ ಮಂಗಳಾದೇವಿ ದೇವಸ್ಥಾನಗಳನ್ನು ಗುರಿಯಾಗಿಸಿ ಭಯೋತ್ಪಾದನಾ ಕೃತ್ಯ ನಡೆಸುವ ಉದ್ದೇಶ ಹೊಂದಿದ್ದುದು ಮೇಲ್ನೊಟಕ್ಕೆ ಸಾಬೀತಾಗಿದೆ. ಈ ಧಾರ್ಮಿಕ ಕೇಂದ್ರಗಳಿಗೆ ಸರ್ಕಾರ ಭದ್ರತೆ ಒದಗಿಸಬೇಕು‘ ಎಂದು ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಒತ್ತಾಯಿಸಿದರು.</p>.<p>ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ನ ಕಚೇರಿ ಸಂಘ ನಿಕೇತನಕ್ಕೂ ಬೆದರಿಕೆ ಇದ್ದು, ಇದಕ್ಕೂ ಸರ್ಕಾರ ರಕ್ಷಣೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>’ಆರೋಪಿಯು ಹಿಂದೂ ಗುರುತನ್ನು ದುರ್ಬಳಕೆ ಮಾಡಿಕೊಂಡಿದ್ದ. ಆತ ಜೀವಂತವಾಗಿ ಸಿಕ್ಕಿದ್ದರಿಂದ ಆತ ಮುಸಲ್ಮಾನ ಎಂಬ ಸತ್ಯ ಹೊರ ಜಗತ್ತಿಗೆ ಗೊತ್ತಾಗಿದೆ. ಇಲ್ಲದಿದ್ದರೆ ಕುಕ್ಕರ್ ಬಾಂಬ್ ಸ್ಫೊಟವನ್ನೂ ಹಿಂದೂಗಳ ತಲೆಗೆ ಕಟ್ಟಲಾಗುತ್ತಿತ್ತು’ ಎಂದರು. </p>.<p>’ಉಗ್ರಗಾಮಿ ಸಂಘಟನೆಗಳ ಪರವಾಗಿ ಗೋಡೆ ಬರೆಹ ಬರದ ಪ್ರಕರಣದಲ್ಲಿ ಬಂಧಿತನಾಗಿದ್ದ. ಶಾರಿಕ್ಗೆ ಜಾಮೀನು ಕೊಡಿಸಿದ್ದು ಯಾರು, ಹಣಕಾಸು ಎಲ್ಲಿಂದ ಬರುತ್ತಿತ್ತು ಎಂದು ತನಿಖೆ ನಡೆಸುವಂತೆ ಗೃಹಸಚಿವರನ್ನು ಒತ್ತಾಯಿಸಿದ್ದೇವೆ’ ಎಂದರು.</p>.<p>‘ಆಟೊರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಸಂಘಟನೆಯಿಂದ ನೆರವು ನಿಡುತ್ತೇವೆ. ಸರ್ಕಾರವೂ ಅವರಿಗೆ ಪರಿಹಾರ ನೀಡಬೇಕು‘ ಎಂದು ಒತ್ತಾಯಿಸಿದರು.</p>.<p>’ಶಾರಿಕ್ಗಿಂತ ಹಿಂದೆಯೂ ಅನೇಕ ಘಟನೆಗಳು ಕರಾವಳಿ ಜಿಲ್ಲೆಯಲ್ಲಿ ನಡೆದಿದೆ. ಕೇವಲ ಭಯೋತ್ಪಾದನೆ ಕೃತ್ಯ ಮಾತ್ರವಲ್ಲ, ಲವ್ ಜಿಹಾದ್, ಬೇನಾಮಿ ಹಣ ಬಳಸಿ ಭೂಮಿ ಖರೀದಿ, ಡ್ರಗ್ಸ್ ದಂಧೆ, ಸೆಕ್ಸ್ ಜಿಹಾದ್ ಕೂಡಾ ಜಿಲ್ಲೆಯಲ್ಲಿ ನಡೆಯುತ್ತಿದೆ’ ಎಂದರು.</p>.<p>‘ಹಿಂದೂ ದೇವಸ್ಥಾನಗಳ ಪರಿಸರದಲ್ಲಿ ಅತ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.</p>.<p>ವಿಎಚ್ಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಹರೀಶ್ ಶೇಟ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ವಿಭಾಗ ಸಂಚಾಲಕ ಭುಜಂಗ ಕುಲಾಲ್, ಬಜರಂಗ ದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>