ಎರಡು ದಿನಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಹಿಂಪ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್, ‘ಇಲ್ಲಿನ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರಿಗೆ, ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ ಶಿಕ್ಷಕಿಯನ್ನು ಬಂಧಿಸದೇ, ನ್ಯಾಯದ ಪರ ಇದ್ದ ಶಾಸಕರ ವಿರುದ್ಧ ಹಾಗೂ ಪ್ರತಿಭಟನೆ ನಡೆದ ಸ್ಥಳದಲ್ಲೇ ಇಲ್ಲದ ಇನ್ನೊಬ್ಬ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದು ಸರಿಯೇ’ ಎಂದು ಪ್ರಶ್ನಿಸಿದರು.