ನಂತರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಜಾಗತಿಕ ಮಟ್ಟದಲ್ಲಿ ಬೇರೂರಿರುವ ಭಯೋತ್ಪಾದನೆ ಚಟುವಟಿಕೆಯು ಕರಾವಳಿ ಜಿಲ್ಲೆಗಳಲ್ಲಿ ನೆಲೆ ಕಾಣಲು ಪ್ರಯತ್ನಿಸುತ್ತಿರುವುದು ಈ ಗೋಡೆಬರಹದಿಂದ ಬಯಲಾಗಿದೆ. ಇದೊಂದು ಆತಂಕಕಾರಿ ಘಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.