ಮಂಗಳೂರು: ಇತ್ತೀಚೆಗೆ ನಡೆದ ಉಪ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗ
ಳಲ್ಲಿ ಪರಾಭವ ಅನುಭವಿಸಿದ ಬಿಜೆಪಿ, ಮುಂಬರುವ ಐದು ರಾಜ್ಯ
ಗಳ ಚುನಾವಣೆಗಳನ್ನು ಗಮನದಲ್ಲಿಟ್ಟು
ಕೊಂಡು ರೈತರ ಆಕ್ರೋಶಕ್ಕೆ ಹೆದರಿ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆದಿದೆ ಎಂದುಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ವಿ. ಕುಕ್ಯಾನ್, ಎಐಟಿಯುಸಿ ಜಿಲ್ಲಾ ಘಟಕದ ಕಾರ್ಯದರ್ಶಿ ವಿ.ಸೀತಾರಾಂ ಬೇರಿಂಜ ತಿಳಿಸಿದ್ದಾರೆ. ಈ ಕಾಯ್ದೆ ತಿದ್ದುಪಡಿಗಳ ವಿಚಾರ ಸಂಸತ್ತಿನಿಂದ ನಿರ್ಗಮಿಸುವವರೆಗೂ ರೈತರು ಎಚ್ಚರ ಇರಬೇಕಾಗಿದೆ. ರೈತ ಸಂಘಗಳು ಮತ್ತು ಜನರು ಎಚ್ಚರಿಕೆಯಿಂದ ಇರಬೇಕು. ತ್ಯಾಗ, ಬಲಿದಾನಗಳಿಂದ ಕೇಂದ್ರ ಸರ್ಕಾರವನ್ನು ಹಿಮ್ಮೆಟ್ಟಿಸಿರುವ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳ ಶ್ರಮ ಶ್ಲಾಘನೀಯ. ಈ ರೈತ ಚಳವಳಿಯಲ್ಲಿ ಮಡಿದ ಹುತಾತ್ಮರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಮತ್ತು ಮಾಸಾಶನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.