<p><strong>ಉಜಿರೆ:</strong> ಮಹಾವಿಷ್ಣುವಿನ ಶಂಖ, ಚಕ್ರ ಮುದ್ರೆಗಳನ್ನು ಸುದರ್ಶನ ಹವನದಲ್ಲಿ ಕಾಯಿಸಿ ತೋಳುಗಳಿಗೆ ಚಿಹ್ನೆ ಧಾರಣೆ ಮಾಡುವುದರಿಂದ ಪಾಪಕರ್ಮಗಳ ನಾಶವಾಗಿ ಮುಂದೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.</p>.<p>ಭಾನುವಾರ ಉಜಿರೆಯ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಮುದ್ರಾಧಾರಣೆ ಮಾಡಿ ಆಶೀರ್ವದಿಸಿದರು.</p>.<p>ಬೆಳ್ತಂಗಡಿ ತಾಲ್ಲೂಕಿನ ಸುಮಾರು 500ಕ್ಕೂ ಮಿಕ್ಕಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಮುದ್ರಾಧಾರಣೆ ಮಾಡಿಸಿಕೊಂಡರು.</p>.<p>ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಉಪಸ್ಥಿತರಿದ್ದರು.</p>.<p>ಚಾತುರ್ಮಾಸ್ಯ ವ್ರತಾಚರಣೆ:ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಜುಲೈ 20ರಿಂದ ಸೆಪ್ಟೆಂಬರ್ 7ರವರೆಗೆ ಸುಬ್ರಹ್ಮಣ್ಯದ ಮೂಲಮಠದಲ್ಲಿ ಚಾತುರ್ಮಾಸ್ಯ ವೃತಾಚರಣೆ ಮಾಡಲಾಗುವುದು ಎಂದು ತಿಳಿಸಿದರು. ಭಕ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಮಹಾವಿಷ್ಣುವಿನ ಶಂಖ, ಚಕ್ರ ಮುದ್ರೆಗಳನ್ನು ಸುದರ್ಶನ ಹವನದಲ್ಲಿ ಕಾಯಿಸಿ ತೋಳುಗಳಿಗೆ ಚಿಹ್ನೆ ಧಾರಣೆ ಮಾಡುವುದರಿಂದ ಪಾಪಕರ್ಮಗಳ ನಾಶವಾಗಿ ಮುಂದೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.</p>.<p>ಭಾನುವಾರ ಉಜಿರೆಯ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಮುದ್ರಾಧಾರಣೆ ಮಾಡಿ ಆಶೀರ್ವದಿಸಿದರು.</p>.<p>ಬೆಳ್ತಂಗಡಿ ತಾಲ್ಲೂಕಿನ ಸುಮಾರು 500ಕ್ಕೂ ಮಿಕ್ಕಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಮುದ್ರಾಧಾರಣೆ ಮಾಡಿಸಿಕೊಂಡರು.</p>.<p>ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಉಪಸ್ಥಿತರಿದ್ದರು.</p>.<p>ಚಾತುರ್ಮಾಸ್ಯ ವ್ರತಾಚರಣೆ:ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಜುಲೈ 20ರಿಂದ ಸೆಪ್ಟೆಂಬರ್ 7ರವರೆಗೆ ಸುಬ್ರಹ್ಮಣ್ಯದ ಮೂಲಮಠದಲ್ಲಿ ಚಾತುರ್ಮಾಸ್ಯ ವೃತಾಚರಣೆ ಮಾಡಲಾಗುವುದು ಎಂದು ತಿಳಿಸಿದರು. ಭಕ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>