<p><strong>ಮಂಗಳೂರು</strong>: ಅಸ್ಪೃಶ್ಯತೆ ತೊಡೆದುಹಾಕಿ, ಸಾಮಾಜಿಕ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ‘ವಿನಯ ಸಾಮರಸ್ಯ’ ಕಾರ್ಯಕ್ರಮವನ್ನು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಮಂಗಳವಾರ ಇಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಸ್ಪೃಶ್ಯತೆ ಮುಕ್ತ ಗ್ರಾಮ ಪಂಚಾಯಿತಿ ರಚನೆಗೆ ಈ ಕಾರ್ಯಕ್ರಮ ಅನುಕೂಲವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿಸಲು ಯೋಚಿಸಲಾಗಿದೆ’ ಎಂದರು.</p>.<p>ಕೊಪ್ಪಳದಲ್ಲಿ ಪರಿಶಿಷ್ಟ ಸಮುದಾಯದ ಯುವಕನಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ಘಟನೆ ಹಿನ್ನೆಲೆಯಲ್ಲಿ, ಆತನ ಹೆಸರಿನಲ್ಲೇ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ಯೋಜನೆ ಜಾರಿಗೊಳಿಸುವ ವೇಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪರಿಶಿಷ್ಟರ ಸಮಾವೇಶ<br />ಆಯೋಜಿಸಲಾಗುವುದು. ರಾಜ್ಯದ 6,020 ಗ್ರಾಮ ಪಂಚಾಯಿತಿಗಳ ಸಾಮಾಜಿಕ ನ್ಯಾಯ ಸಮಿತಿ ಹಾಗೂ ನಗರ ವ್ಯಾಪ್ತಿಯ ಎಸ್ಸಿ ಎಸ್ಟಿ ಕುಂದುಕೊರತೆ ಸಮಿತಿ ಸಹಕಾರದೊಂದಿಗೆ ಈ ಸಮಾವೇಶ ಸಂಘಟಿಸಲಾಗುತ್ತದೆ. ಅಸ್ಪೃಶ್ಯತೆ ಮುಕ್ತ ಗ್ರಾಮ ಪಂಚಾಯಿತಿ ರೂಪುಗೊಂಡರೆ, ₹ 25 ಲಕ್ಷದಿಂದ ₹ 50 ಲಕ್ಷದವರೆಗೆ ಬಹುಮಾನ ನೀಡಲು ಯೋಚಿಸಲಾಗಿದೆ ಎಂದು ಹೇಳಿದರು.</p>.<p>ಅಂತ್ಯೋದಯ ಪರಿಕಲ್ಪನೆಯಲ್ಲಿ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಪಂಡಿತ್ ದೀನ್ದಯಾಳ್ ಹೆಸರಿನಲ್ಲಿ ರಾಜ್ಯದ ಐದು ಕಡೆಗಳಲ್ಲಿ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು. ಒಂದು ಶಿಕ್ಷಣ ಕೇಂದ್ರದಲ್ಲಿ 1,000 ವಿದ್ಯಾರ್ಥಿಗಳಿಗೆ ವಸತಿ ನಿಲಯ ತೆರೆಯಲಾಗುವುದು. ವಿಶ್ವವಿದ್ಯಾಲಯಗಳ ಆವರಣಗಳಲ್ಲೇ ಇದನ್ನು ಸ್ಥಾಪಿಸಲು ಯೋಚಿಸಲಾಗಿದೆ. ಈ ವಸತಿ ನಿಲಯಗಳಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಮೀಸಲಾತಿ ಇಲ್ಲದ ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಲಾಗುತ್ತದೆ. ಮಂಗಳೂರು,ಮೈಸೂರು, ಶಿವಮೊಗ್ಗ, ಧಾರವಾಡ ಹಾಗೂ ದಾವಣಗೆರೆಗಳಲ್ಲಿ ಈ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.</p>.<p>ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಕಳೆದ ವರ್ಷ 2,400 ವಸತಿ ನಿಲಯಗಳಲ್ಲಿ 2 ಲಕ್ಷ ವಿದ್ಯಾರ್ಥಿಗಳು ಇದ್ದರು. ಈ ಪೈಕಿ 1.20 ಲಕ್ಷ ವಿದ್ಯಾರ್ಥಿಗಳು ‘ವಿದ್ಯಾಸಿರಿ’ ಮೂಲಕ ನೆರವು ಪಡೆದಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಸತಿಗೆ ಅವಕಾಶ ಕಲ್ಪಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಕಳೆದ ವರ್ಷ ಮಂಗಳೂರಿನ ಬಿಜೈ ಮತ್ತು<br />ಜಪ್ಪಿನಮೊಗರಿನಲ್ಲಿ ತಲಾ 125 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ವಸತಿ ನಿಲಯದ ಸೌಲಭ್ಯ ಕಲ್ಪಿಸಲಾಗಿತ್ತು. ಈ ಬಾರಿಯೂ ವಸತಿ ನಿಲಯದ ಕೊರತೆ ಎದುರಾಗಲಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ಕನಕದಾಸ ವಸತಿ ನಿಲಯ</strong></p>.<p>ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾದ ಕನಕದಾಸ ವಸತಿ ನಿಲಯಗಳನ್ನು ರಾಜ್ಯದ 50 ಕಡೆಗಳಲ್ಲಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ₹ 175 ಕೋಟಿ ವೆಚ್ಚದಲ್ಲಿ ಈ ವಸತಿ ನಿಲಯ ಸ್ಥಾಪನೆಯಾಗಲಿದೆ. ಅಂಬೇಡ್ಕರ್ ನಿಗಮದ ಮೂಲಕ ₹ 350 ಕೋಟಿ ವೆಚ್ಚದಲ್ಲಿ ವಿವಿಧೆಡೆಗಳಲ್ಲಿ 100 ವಸತಿ ನಿಲಯಗಳನ್ನು ಸ್ಥಾಪಿಸಲಾಗುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾರಾಯಣಗುರು ಹೆಸರಿನಲ್ಲಿ ವಸತಿ ಶಾಲೆ ಪ್ರಾರಂಭಿಸಲಾಗುವುದು. ಪ್ರತಿ ವಸತಿ ಶಾಲೆಗೆ ₹ 29 ಕೋಟಿ ಮೀಸಲಿಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಅಸ್ಪೃಶ್ಯತೆ ತೊಡೆದುಹಾಕಿ, ಸಾಮಾಜಿಕ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ‘ವಿನಯ ಸಾಮರಸ್ಯ’ ಕಾರ್ಯಕ್ರಮವನ್ನು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಮಂಗಳವಾರ ಇಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಸ್ಪೃಶ್ಯತೆ ಮುಕ್ತ ಗ್ರಾಮ ಪಂಚಾಯಿತಿ ರಚನೆಗೆ ಈ ಕಾರ್ಯಕ್ರಮ ಅನುಕೂಲವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿಸಲು ಯೋಚಿಸಲಾಗಿದೆ’ ಎಂದರು.</p>.<p>ಕೊಪ್ಪಳದಲ್ಲಿ ಪರಿಶಿಷ್ಟ ಸಮುದಾಯದ ಯುವಕನಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ಘಟನೆ ಹಿನ್ನೆಲೆಯಲ್ಲಿ, ಆತನ ಹೆಸರಿನಲ್ಲೇ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ಯೋಜನೆ ಜಾರಿಗೊಳಿಸುವ ವೇಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪರಿಶಿಷ್ಟರ ಸಮಾವೇಶ<br />ಆಯೋಜಿಸಲಾಗುವುದು. ರಾಜ್ಯದ 6,020 ಗ್ರಾಮ ಪಂಚಾಯಿತಿಗಳ ಸಾಮಾಜಿಕ ನ್ಯಾಯ ಸಮಿತಿ ಹಾಗೂ ನಗರ ವ್ಯಾಪ್ತಿಯ ಎಸ್ಸಿ ಎಸ್ಟಿ ಕುಂದುಕೊರತೆ ಸಮಿತಿ ಸಹಕಾರದೊಂದಿಗೆ ಈ ಸಮಾವೇಶ ಸಂಘಟಿಸಲಾಗುತ್ತದೆ. ಅಸ್ಪೃಶ್ಯತೆ ಮುಕ್ತ ಗ್ರಾಮ ಪಂಚಾಯಿತಿ ರೂಪುಗೊಂಡರೆ, ₹ 25 ಲಕ್ಷದಿಂದ ₹ 50 ಲಕ್ಷದವರೆಗೆ ಬಹುಮಾನ ನೀಡಲು ಯೋಚಿಸಲಾಗಿದೆ ಎಂದು ಹೇಳಿದರು.</p>.<p>ಅಂತ್ಯೋದಯ ಪರಿಕಲ್ಪನೆಯಲ್ಲಿ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಪಂಡಿತ್ ದೀನ್ದಯಾಳ್ ಹೆಸರಿನಲ್ಲಿ ರಾಜ್ಯದ ಐದು ಕಡೆಗಳಲ್ಲಿ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು. ಒಂದು ಶಿಕ್ಷಣ ಕೇಂದ್ರದಲ್ಲಿ 1,000 ವಿದ್ಯಾರ್ಥಿಗಳಿಗೆ ವಸತಿ ನಿಲಯ ತೆರೆಯಲಾಗುವುದು. ವಿಶ್ವವಿದ್ಯಾಲಯಗಳ ಆವರಣಗಳಲ್ಲೇ ಇದನ್ನು ಸ್ಥಾಪಿಸಲು ಯೋಚಿಸಲಾಗಿದೆ. ಈ ವಸತಿ ನಿಲಯಗಳಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಮೀಸಲಾತಿ ಇಲ್ಲದ ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಲಾಗುತ್ತದೆ. ಮಂಗಳೂರು,ಮೈಸೂರು, ಶಿವಮೊಗ್ಗ, ಧಾರವಾಡ ಹಾಗೂ ದಾವಣಗೆರೆಗಳಲ್ಲಿ ಈ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.</p>.<p>ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಕಳೆದ ವರ್ಷ 2,400 ವಸತಿ ನಿಲಯಗಳಲ್ಲಿ 2 ಲಕ್ಷ ವಿದ್ಯಾರ್ಥಿಗಳು ಇದ್ದರು. ಈ ಪೈಕಿ 1.20 ಲಕ್ಷ ವಿದ್ಯಾರ್ಥಿಗಳು ‘ವಿದ್ಯಾಸಿರಿ’ ಮೂಲಕ ನೆರವು ಪಡೆದಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಸತಿಗೆ ಅವಕಾಶ ಕಲ್ಪಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಕಳೆದ ವರ್ಷ ಮಂಗಳೂರಿನ ಬಿಜೈ ಮತ್ತು<br />ಜಪ್ಪಿನಮೊಗರಿನಲ್ಲಿ ತಲಾ 125 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ವಸತಿ ನಿಲಯದ ಸೌಲಭ್ಯ ಕಲ್ಪಿಸಲಾಗಿತ್ತು. ಈ ಬಾರಿಯೂ ವಸತಿ ನಿಲಯದ ಕೊರತೆ ಎದುರಾಗಲಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ಕನಕದಾಸ ವಸತಿ ನಿಲಯ</strong></p>.<p>ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾದ ಕನಕದಾಸ ವಸತಿ ನಿಲಯಗಳನ್ನು ರಾಜ್ಯದ 50 ಕಡೆಗಳಲ್ಲಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ₹ 175 ಕೋಟಿ ವೆಚ್ಚದಲ್ಲಿ ಈ ವಸತಿ ನಿಲಯ ಸ್ಥಾಪನೆಯಾಗಲಿದೆ. ಅಂಬೇಡ್ಕರ್ ನಿಗಮದ ಮೂಲಕ ₹ 350 ಕೋಟಿ ವೆಚ್ಚದಲ್ಲಿ ವಿವಿಧೆಡೆಗಳಲ್ಲಿ 100 ವಸತಿ ನಿಲಯಗಳನ್ನು ಸ್ಥಾಪಿಸಲಾಗುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾರಾಯಣಗುರು ಹೆಸರಿನಲ್ಲಿ ವಸತಿ ಶಾಲೆ ಪ್ರಾರಂಭಿಸಲಾಗುವುದು. ಪ್ರತಿ ವಸತಿ ಶಾಲೆಗೆ ₹ 29 ಕೋಟಿ ಮೀಸಲಿಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>