ಮಂಗಳೂರು: ನಗರದಲ್ಲಿ ಈಚೆಗೆ ನಡೆದ ಗಲಭೆಯ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ ಘೋಷಿಸಿರುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಆದರೆ, ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಇಂತಹ ಕೃತ್ಯ ಮಾಡುತ್ತಿದ್ದಾರೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಆಯುಕ್ತ ಡಾ. ಹರ್ಷ ಸ್ಪಷ್ಟಪಡಿಸಿದ್ದಾರೆ.
148 ಜನರಿಗೆ ಒಟ್ಟು ₹10 ಲಕ್ಷ ಬಹುಮಾನ ನೀಡಲಾಗಿದೆ ಎಂದು ಹೇಳಿರುವ ಈ ಪತ್ರದಲ್ಲಿ ಆದೇಶ ಸಂಖ್ಯೆಯಾಗಲಿ, ಅಧಿಕೃತ ಅಧಿಕಾರಿಯ ಸಹಿಯಾಗಲಿ ಇಲ್ಲ. ಹೀಗಾಗಿ ಇದೊಂದು ನಕಲಿ ಪತ್ರ ಎಂದು ಪೊಲೀಸರು ತಿಳಿಸಿದ್ದಾರೆ.