ಕೃತಿಕಾರ ಡಾ.ವಸಂತಕುಮಾರ್ ಪೆರ್ಲ ಮಾತನಾಡಿ, ‘ವಿಷ್ಣು ಮಂಗಲ ಎಂಬುದು ಆಧುನಿಕತೆಯತ್ತ ಮುಖ ಮಾಡಿದ ಸ್ವಾತಂತ್ರ್ಯಾನಂತರದ ಭಾರತದ ಹಳ್ಳಿಯೊಂದರ ಪ್ರತಿರೂಪ. ಹಳ್ಳಿಗಳಲ್ಲಿ ನಡೆಯುವ ವ್ಯವಹಾರಗಳು ಸಂಕೀರ್ಣವಾದ ಮನುಷ್ಯ ಸಂಬಂಧಗಳ ಮೂಲಕ ಕಲಾತ್ಮಕ ಕಥೆಗಳಾಗಿ ರೂಪ ತಾಳಿವೆ ಎಂದರು. ಧರ್ಮದರ್ಶಿ ಹರಿಕೃಷ್ಣ ಪುನರೂರು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಇದ್ದರು.