ಪ್ರತಿವರ್ಷ ನಡೆಯುವ ವಿಷು ಮಾಸದ ಜಾತ್ರೆ ಬಗ್ಗೆ ದೇವ ಪ್ರಶ್ನೆಯ ಮೂಲಕ ಪರಿಶೀಲಿಸಲಾಗಿ, ಸಾಂಪ್ರದಾಯಿಕವಾಗಿ ನಡೆಯುವ ಧರ್ಮದೇವತೆಗಳ ಹಾಗೂ ಅಣ್ಣಪ್ಪ ಸ್ವಾಮಿಯ ನೇಮ-ಕೋಲಗಳು ಹಾಗೂ ಮುಂದೆ ಐದು ದಿನಗಳ ಕಾಲ ನಡೆಯಬೇಕಾದ ಮಂಜುನಾಥ ಸ್ವಾಮಿ ರಥೋತ್ಸವ, ವಿವಿಧ ಕಟ್ಟೆಗಳಿಗೆ ವಿಹಾರ ಇತ್ಯಾದಿ ಕಾರ್ಯಕ್ರಮಗಳ ಜೊತೆಗೆ ನೇತ್ರಾವತಿ ನದಿಗೆ ಅವಭೃತ ವಿಹಾರ ಮಾಡುವುದನ್ನೂ ರದ್ದುಪಡಿಸಲಾಗಿದೆ. ಎಲ್ಲವನ್ನೂ ದೇವ ಪ್ರಶ್ನೆಯ ಮೂಲಕ ಶ್ರೀಸ್ವಾಮಿಯ ಒಪ್ಪಿಗೆ ಪಡೆದು ಪರಿವರ್ತನೆ ಮಾಡಲಾಗಿದೆ.