<p><strong>ವಿಟ್ಲ</strong>: ವಿಕಸಿತ ಭಾರತ ನಿರ್ಮಾ ಣವಾಗಲು ತಳಹದಿ ಗಟ್ಟಿಯಾಗಬೇಕು ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.</p>.<p>ಒಡಿಯೂರು ಸಂಸ್ಥಾನದ ರಾಜಾಂಗಣದಲ್ಲಿ ಸೋಮವಾರ ನಡೆದ ಒಡಿಯೂರು ಶ್ರೀಗುರುದೇವ ವಿದ್ಯಾಪೀಠದ ಶಾಲಾ ಆರಂಭೋತ್ಸವವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.</p>.<p>ಆಧ್ಯಾತ್ಮ ಶಿಕ್ಷಣ ಎಲ್ಲರಿಗೂ ಸಿಗಬೇಕು. ನೈತಿಕ ಭಲವನ್ನು ತುಂಬುವ ಕೆಲಸ ಈ ವಿದ್ಯಾಸಂಸ್ಥೆಯಿಂದ ಆಗುತ್ತಿದೆ. ಗುರುಕುಲ ಮಾದರಿಯ ಶಿಕ್ಷಣ ಇಲ್ಲಿ ಸಿಗುತ್ತಿದೆ. ತಂತ್ರಜ್ಞಾನವೂ ಬೇಕು. ಜೊತೆಜೊತೆಗೆ ಆಧ್ಯಾತ್ಮಿಕತೆಯು ಬೆಳೆಯಬೇಕು ಎಂದರು.</p>.<p>ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡಿ, ಎರಡು ತಿಂಗಳ ಬಳಿಕ ಈ ಪರಿಸರ ಮತ್ತೆ ಜೀವಂತಿಕೆ ಪಡೆದಿದೆ. ಮಕ್ಕಳ ಯಶಸ್ಸಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಣದೊಂದಿಗೆ ವ್ಯಕ್ತಿತ್ವ ನಿರ್ಮಾಣದ ಕೆಲಸ ನಮ್ಮ ವಿದ್ಯಾಪೀಠದಿಂದ ಆಗುತ್ತಿದೆ ಎಂದರು.</p>.<p>ಶಾಲಾ ಸಂಚಾಲಕ ಸೇರಾಜೆ ಗಣಪತಿ ಭಟ್ ಮಾತನಾಡಿ, ವ್ಯಕ್ತಿತ್ವ ನಿರ್ಮಾಣ ಶಿಕ್ಷಣದಿಂದ ಸಾಧ್ಯ. ನಮ್ಮ ಮಕ್ಕಳನ್ನು ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ಮಾಡಿ. ಆ ಮೂಲಕ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದರು.</p>.<p>ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಲೋಕನಾಥ ಶೆಟ್ಟಿ ತಾಳಿಪ್ಪಾಡಿ, ಅವರ ಪತ್ನಿ ಸರಿತಾ ಲೋಕನಾಥ ಶೆಟ್ಟಿ ಭಾಗವಹಿಸಿದ್ದರು.</p>.<p>ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಮಕ್ಕಳನ್ನು ಹೂ ನೀಡಿ ಸ್ವಾಗತಿಸಲಾಯಿತು. 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು, ಅವರ ಪೋಷಕರನ್ನು, ಶಿಕ್ಷಕಿಯರನ್ನು ಸ್ವಾಮೀಜಿ ಗೌರವಿಸಿದರು.</p>.<p>ಶಾಲಾ ಶಿಕ್ಷಕರಾದ ಶೇಖರ ಶೆಟ್ಟಿ ಬಾಯಾರು ನಿರೂಪಿಸಿದರು. ಮುಖ್ಯ ಶಿಕ್ಷಕಿ ರೇಣುಕಾ ಎಸ್.ರೈ ಸ್ವಾಗತಿಸಿದರು. ಶಿಕ್ಷಕಿ ಹೇಮಾವತಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-29-593394084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ</strong>: ವಿಕಸಿತ ಭಾರತ ನಿರ್ಮಾ ಣವಾಗಲು ತಳಹದಿ ಗಟ್ಟಿಯಾಗಬೇಕು ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.</p>.<p>ಒಡಿಯೂರು ಸಂಸ್ಥಾನದ ರಾಜಾಂಗಣದಲ್ಲಿ ಸೋಮವಾರ ನಡೆದ ಒಡಿಯೂರು ಶ್ರೀಗುರುದೇವ ವಿದ್ಯಾಪೀಠದ ಶಾಲಾ ಆರಂಭೋತ್ಸವವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.</p>.<p>ಆಧ್ಯಾತ್ಮ ಶಿಕ್ಷಣ ಎಲ್ಲರಿಗೂ ಸಿಗಬೇಕು. ನೈತಿಕ ಭಲವನ್ನು ತುಂಬುವ ಕೆಲಸ ಈ ವಿದ್ಯಾಸಂಸ್ಥೆಯಿಂದ ಆಗುತ್ತಿದೆ. ಗುರುಕುಲ ಮಾದರಿಯ ಶಿಕ್ಷಣ ಇಲ್ಲಿ ಸಿಗುತ್ತಿದೆ. ತಂತ್ರಜ್ಞಾನವೂ ಬೇಕು. ಜೊತೆಜೊತೆಗೆ ಆಧ್ಯಾತ್ಮಿಕತೆಯು ಬೆಳೆಯಬೇಕು ಎಂದರು.</p>.<p>ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡಿ, ಎರಡು ತಿಂಗಳ ಬಳಿಕ ಈ ಪರಿಸರ ಮತ್ತೆ ಜೀವಂತಿಕೆ ಪಡೆದಿದೆ. ಮಕ್ಕಳ ಯಶಸ್ಸಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಣದೊಂದಿಗೆ ವ್ಯಕ್ತಿತ್ವ ನಿರ್ಮಾಣದ ಕೆಲಸ ನಮ್ಮ ವಿದ್ಯಾಪೀಠದಿಂದ ಆಗುತ್ತಿದೆ ಎಂದರು.</p>.<p>ಶಾಲಾ ಸಂಚಾಲಕ ಸೇರಾಜೆ ಗಣಪತಿ ಭಟ್ ಮಾತನಾಡಿ, ವ್ಯಕ್ತಿತ್ವ ನಿರ್ಮಾಣ ಶಿಕ್ಷಣದಿಂದ ಸಾಧ್ಯ. ನಮ್ಮ ಮಕ್ಕಳನ್ನು ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ಮಾಡಿ. ಆ ಮೂಲಕ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದರು.</p>.<p>ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಲೋಕನಾಥ ಶೆಟ್ಟಿ ತಾಳಿಪ್ಪಾಡಿ, ಅವರ ಪತ್ನಿ ಸರಿತಾ ಲೋಕನಾಥ ಶೆಟ್ಟಿ ಭಾಗವಹಿಸಿದ್ದರು.</p>.<p>ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಮಕ್ಕಳನ್ನು ಹೂ ನೀಡಿ ಸ್ವಾಗತಿಸಲಾಯಿತು. 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು, ಅವರ ಪೋಷಕರನ್ನು, ಶಿಕ್ಷಕಿಯರನ್ನು ಸ್ವಾಮೀಜಿ ಗೌರವಿಸಿದರು.</p>.<p>ಶಾಲಾ ಶಿಕ್ಷಕರಾದ ಶೇಖರ ಶೆಟ್ಟಿ ಬಾಯಾರು ನಿರೂಪಿಸಿದರು. ಮುಖ್ಯ ಶಿಕ್ಷಕಿ ರೇಣುಕಾ ಎಸ್.ರೈ ಸ್ವಾಗತಿಸಿದರು. ಶಿಕ್ಷಕಿ ಹೇಮಾವತಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-29-593394084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>